ಬಿಲ್ ಪಾಸ್ ಮಾಡಲು ಲಂಚದ ಬೇಡಿಕೆ: ಎಸಿಬಿ ಬಲೆಗೆ ಬಿದ್ದ ಕೃಷಿ ಅಧಿಕಾರಿ

ಟ್ರಾಕ್ಟರ್ ರೊಟೋವೇಟರ್ ಬಿಲ್ ಪಾಸ್ ಮಾಡಲು ಲಂಚ ಕೇಳಿದ ಕೃಷಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಸೋಮವಾರ ಸಂಜೆ ದಾಳಿ ನಡೆಸಿ ದಾಖಲೆ ವಶಪಡಿಸಿಕೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಾಮರಾಜನಗರ: ಟ್ರಾಕ್ಟರ್ ರೊಟೋವೇಟರ್ ಬಿಲ್ ಪಾಸ್ ಮಾಡಲು ಲಂಚ ಕೇಳಿದ ಕೃಷಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಸೋಮವಾರ ಸಂಜೆ ದಾಳಿ ನಡೆಸಿ ದಾಖಲೆ ವಶಪಡಿಸಿಕೊಂಡಿದ್ದಾರೆ.

ಅಮ್ಮನ್ ಕಂಪನಿಯ ಇಂಜಿನಿಯರ್ ಶಿವಕುಮಾರ್ ಅವರ ದೂರಿನ ಮೇರೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಂ.ಶಿವಕುಮಾರ್ ಕೃಷಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಟ್ರಾಕ್ಟರ್ ರೊಟೋವೇಟರ್ ಬಿಲ್ ಪಾಸ್ ಮಾಡಲು 29 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.

ಎಸಿಬಿ ಡಿಎಸ್ಪಿ ಸದಾನಂದ ತಿಪ್ಪಣನವರ್, ಸಿಪಿಐ ಶ್ರೀಕಾಂತ್, ದೀಪಕ್, ನೇತೃತ್ವದ ತಂಡ ಕೃಷಿ ಅಧಿಕಾರಿ ಶಿವಕುಮಾರ್ ಕಛೇರಿ ಮೇಲೆ ದಾಳಿ ನಡೆಸಿ ವಿಚಾರಣೆ ನಡೆಸಿದ್ದಾರೆ.

 ವರದಿ:- ಗೂಳಿಪುರ ನಂದೀಶ ಎಂ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com