ರಸ್ತೆ ಅಪಘಾತ: ವರದಿಗಾರನ ದುರಂತ ಸಾವು

ಹಾವೇರಿ ಜಿಲ್ಲೆಯ ಪ್ರಜಾವಾಣಿ ವರದಿಗಾರ ಮಂಜುನಾಥ್ (30)  ಇಲ್ಲಿನ ಕೊಡಗುನೂರಿನ ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಮೃತ ಮಂಜುನಾಥ್
ಮೃತ ಮಂಜುನಾಥ್

ದಾವಣಗೆರೆ : ಹಾವೇರಿ ಜಿಲ್ಲೆಯ ಪ್ರಜಾವಾಣಿ ವರದಿಗಾರ ಮಂಜುನಾಥ್ (30)  ಇಲ್ಲಿನ ಕೊಡಗುನೂರಿನ ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

 ಮಂಜುನಾಥ್ ಪ್ರಜಾವಾಣಿ ಪತ್ರಿಕೆಯಲ್ಲಿ ಕ್ರೈಂ ವರದಿಗಾರನಾಗಿ ಕೆಲಸ ಮಾಡುತ್ತಿದ್ದರು.  ಹೊಳಲ್ಕೆರೆಯಲ್ಲಿರುವ ಅಕ್ಕನ ಮನೆಗೆ ಹಾವೇರಿಯಿಂದ ಬೈಕ್ ನಲ್ಲಿ ಹೋಗುತ್ತಿದ್ದಾಗ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಟ್ರಾಕ್ಟರ್ ಸಮೇತ ಚಾಲಕ ಪರಾರಿಯಾಗಿದ್ದಾನೆ.

ಶವವನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ಅಂತ್ಯಸಂಸ್ಕಾರ ಗುರುವಾರ ಶಿವಮೊಗ್ಗದಲ್ಲಿ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com