ಬೆಂಗಳೂರು: ಉಪ ಚುನಾವಣೆ ಹಿನ್ನೆಲೆಯಲ್ಲಿ ರೌಡಿಗಳ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ನಗರ ಪೊಲೀಸರು, ಮತ್ತೊಬ್ಬ ರೌಡಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.
ಹಲಸೂರಿನ ಗೌತಮ್ಪುರದ ನಿವಾಸಿ, ರೌಡಿ ಕಾರ್ತಿಕ್ ಅಲಿಯಾಸ್ ರಾಹುಲ್ (29)ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಡಿಸಿಪಿ ಡಾ. ಎಸ್.ಟಿ. ಶರಣಪ್ಪ ತಿಳಿಸಿದ್ದಾರೆ.
ಕಾರ್ತಿಕ್, ಹಲಸೂರು ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿದ್ದು, ಕೊಲೆಯತ್ನ, ಅತ್ಯಾಚಾರ, ಸುಲಿಗೆ, ದೊಂಬಿ ಇನ್ನಿತರ ಗಂಭೀರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಅತ್ಯಾಚಾರ ಪ್ರಕರಣದಲ್ಲಿ ಈತನಿಗೆ ನ್ಯಾಯಾಲಯವು 7 ವರ್ಷ ಕಠಿಣ ಶಿಕ್ಷೆ ವಿಧಿಸಿದ್ದರೂ ರೌಡಿ ಚಟುವಟಿಕೆಗಳಲ್ಲಿ ತೊಡಗಿ ಸ್ಥಳೀಯರ ನೆಮ್ಮದಿಗೆ ಭಂಗವುಂಟು ಮಾಡಿದ್ದ. ರೌಡಿ ಕಾರ್ತಿಕ್ನನ್ನು ಹಲವು ಬಾರಿ ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿಕೊಂಡಿದ್ದರೂ ಮತ್ತೆ ಮತ್ತೆ ರೌಡಿ ಚಟುವಟಿಕೆಗಳಲ್ಲಿ ತೊಡಗಿದ್ದ ಎಂದು ಅವರು ಮಾಹಿತಿ ನೀಡಿದ್ದಾರೆ.
Advertisement