ತನ್ವೀರ್ ಸೇಠ್ ಮೇಲೆ ಹಲ್ಲೆಗೂ ಮುನ್ನ ಆರೋಪಿಯಿಂದ ನಾಯಿಗಳ ಕತ್ತು ಸೀಳಿ ತರಬೇತಿ, ಭಯಾನಕ ಸತ್ಯ ಬಹಿರಂಗ!

ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ದಾಳಿಕೋರ ಹಲ್ಲೆಗೂ ಮುನ್ನ ಶ್ವಾನಗಳ ಕತ್ತು ಸೀಳಿ ತರಬೇತಿ ಪಡೆಯುತ್ತಿದ್ದ ಎಂಬ ಆಘಾತಕಾರಿ ಸುದ್ದಿ ಬಹಿರಂಗಗೊಂಡಿದೆ.
ತನ್ವೀರ್ ಸೇಠ್-ಫರಾನ್
ತನ್ವೀರ್ ಸೇಠ್-ಫರಾನ್

ಬೆಂಗಳೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ದಾಳಿಕೋರ ಹಲ್ಲೆಗೂ ಮುನ್ನ ಶ್ವಾನಗಳ ಕತ್ತು ಸೀಳಿ ತರಬೇತಿ ಪಡೆಯುತ್ತಿದ್ದ ಎಂಬ ಆಘಾತಕಾರಿ ಸುದ್ದಿ ಬಹಿರಂಗಗೊಂಡಿದೆ. 

ಶ್ವಾನಗಳ ಕತ್ತು ಮನುಷ್ಯರ ಕತ್ತಿಗಿಂತ ಗಟ್ಟಿಯೆಂಬ ಕಾರಣಕ್ಕೆ ತಂಡ ನಾಯಿಗಳ ಕತ್ತು ಸೀಳಿ ತರಬೇತಿ ಪಡೆದಿತ್ತು ಎಂಬ ಆತಂಕಕಾಗಿ ವಿಷಯ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. 

ಬನ್ನಿಮಂಟಪ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಆರತಕ್ಷತೆ ವೇಳೆ ತನ್ವೀರ್ ಸೇಠ್ ಅವರು ಆಸೀನರಾಗಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಆರೋಪಿ ಫರ್ಹಾನ್ ಪಾಷಾ ಸೇಠ್ ಮೇಲೆ ಚೂರಿಯಿಂದ ಹಲ್ಲೆ ಮಾಡಿದ್ದ. ಅಲ್ಲದೆ ಈ ಹಿಂದೆ ಕೂಡ ನಾಲ್ಕು ಬಾರಿ ತನ್ವೀರ್ ಸೇಠ್ ಅವರನ್ನು ಹತ್ಯೆ ಮಾಡಲು ಯತ್ನ ನಡೆಸಿದ್ದ ಎಂದು ಹೇಳಲಾಗುತ್ತಿದೆ. 

ಸದ್ಯ ಮೈಸೂರು ನಗರ ಪೊಲೀಸ್ ಆಯುಕ್ತ ಕೆಟಿ ಬಾಲಕೃಷ್ಣ ಅವರು ತನ್ವೀರ್ ಸೇಠ್ ಅವರಿಗೆ ನೀಡಲಾಗುತ್ತಿದ್ದ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಪ್ರತೀ ಪಾಳಿಯಲ್ಲೂ ಮೂವರು ಗನ್ ಮ್ಯಾನ್ ಗಳನ್ನು ನಿಯೋಜಿಸಿದ್ದಾರೆ. ಈ ಹಿಂದೆ ತನ್ವೀರ್ ಸೇಠ್ ಅವರಿಗೆ ಭದ್ರತೆ ನೀಡುತ್ತಿದ್ದ ಗನ್ ಮ್ಯಾನ್ ಫಿರೋಜ್ ಖಾನ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. 

ಗಣ್ಯ ವ್ಯಕ್ತಿಗಳನ್ನು ಕೊಲೆ ಮಾಡಿ ಹೆಸರು ಮಾಡಬೇಕು ಎಂಬ ದುರುದ್ದೇಶವನ್ನು ಫರಾನ್ ಹೊಂದಿದ್ದ ಎಂದು ಫರಾನ್ ಸ್ನೇಹಿತರು ವಿಚಾರಣೆ ವೇಳೆ ತಿಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com