ಚಿತ್ರದುರ್ಗ: ಹಿರಿಯೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ಕಾರೊಂದು ಲಾರಿಗೆ ಅಪ್ಪಳಿಸಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಬೆಂಗಳೂರು ವಾಸಿಗಳಾದ ಸೊಹ್ರಬ್(28) ಮತ್ತು ಇಶಾನ್(21) ಎಂದು ಗುರುತಿಸಲಾಗಿದ್ದು, ನತದೃಷ್ಟರು ಗೋವಾ ದಿಂದ ಬೆಂಗಳೂರಿಗೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಂಜು ಮುಸುಕಿದ ವಾತಾವರಣದಿಂದ ಸ್ಪಷ್ಟವಾಗಿ ಕಾಣದೆ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
Advertisement