ಕೋಳಿಪಾಳ್ಯ ಮನೆಯೊಂದರಲ್ಲಿ ಜಿಂಕೆ ಮಾಂಸ ಸಂಗ್ರಹ: ಪರಿಶೀಲನೆ ವೇಳೆ ದಂಪತಿ ಪರಾರಿ!

ನಾಗರಾಜ ಎಂಬುವವರ ಮನೆಯಲ್ಲಿ ಜಿಂಕೆ ಮಾಂಸ ಶೇಖರಿಸಿಟ್ಟುಕೊಂಡಿದ್ದ ಘಟನೆ ಚಾಮರಾಜನಗರ ತಾಲೂಕಿನ ಕೋಳಿಪಾಲ್ಯದಲ್ಲಿ ನಡೆದಿದೆ‌. ಅರಣ್ಯಾಧಿಕಾರಿ ಕಾಂತರಾಜು ನೇತೃತ್ವದಲ್ಲಿ ದಾಳಿ ನಡೆಸಿ 4 ಕೆಜಿ ಜಿಂಕೆ ಮಾಂಸವನ್ನು ವಶಪಡಿಸಿಕೊಂಡಿದ್ದು, ವೃದ್ಧ ದಂಪತಿ ಪರಾರಿಯಾಗಿದ್ದಾರೆ.
ಕೋಳಿಪಾಳ್ಯ ಮನೆಯೊಂದರಲ್ಲಿ ಜಿಂಕೆ ಮಾಂಸ ಸಂಗ್ರಹ: ಪರಿಶೀಲನೆ ವೇಳೆ ದಂಪತಿ ಪರಾರಿ!
ಕೋಳಿಪಾಳ್ಯ ಮನೆಯೊಂದರಲ್ಲಿ ಜಿಂಕೆ ಮಾಂಸ ಸಂಗ್ರಹ: ಪರಿಶೀಲನೆ ವೇಳೆ ದಂಪತಿ ಪರಾರಿ!

ಚಾಮರಾಜನಗರ: ಮನೆಯಲ್ಲಿ ಜಿಂಕೆ ಮಾಂಸ ಶೇಖರಿಸಿಟ್ಟುಕೊಂಡಿದ್ದ ಘಟನೆ ಚಾಮರಾಜನಗರ ತಾಲೂಕಿನ ಕೋಳಿಪಾಳ್ಯದಲ್ಲಿ ನಡೆದಿದೆ‌.

ಗ್ರಾಮದ ನಾಗರಾಜ(60) ಎಂಬುವವರ ಮನೆಯಲ್ಲಿ ಜಿಂಕೆ ಮಾಂಸ ಶೇಖರಿಸಿರುವ ಖಚಿತ ಮಾಹಿತಿ ಮೇರೆಗೆ ಬಿಆರ್​ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯ ಅರಣ್ಯಾಧಿಕಾರಿ ಕಾಂತರಾಜು ನೇತೃತ್ವದಲ್ಲಿ ದಾಳಿ ನಡೆಸಿ 4 ಕೆಜಿ ಜಿಂಕೆ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ‌. ಈ ವೇಳೆ, ನಾಗರಾಜ ತನ್ನ ಪತ್ನಿಯೊಂದಿಗೆ ಪರಾರಿಯಾಗಿದ್ದಾನೆ.

ವನ್ಯ ಜೀವಿ ಸಂರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಶಪಡಿಸಿಕೊಂಡ ಜಿಂಕೆ ಮಾಂಸವನ್ನು ಅರಣ್ಯ ಇಲಾಖೆ ಅಧಿಕಾರಿಗಳುಬೆಂಕಿಯಲ್ಲಿ ಸುಟ್ಟು ನಾಶಪಡಿಸಿದ್ದಾರೆ. ಪರಾರಿಯಾದ ದಂಪತಿ ಪತ್ತೆಗೆ ಬಲೆ ಬೀಸಲಾಗಿದೆ.

ವರದಿ:- ಗೂಳಿಪುರ ನಂದೀಶ ಎಂ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com