ಚಾಮರಾಜನಗರ: ಮನೆಯಲ್ಲಿ ಜಿಂಕೆ ಮಾಂಸ ಶೇಖರಿಸಿಟ್ಟುಕೊಂಡಿದ್ದ ಘಟನೆ ಚಾಮರಾಜನಗರ ತಾಲೂಕಿನ ಕೋಳಿಪಾಳ್ಯದಲ್ಲಿ ನಡೆದಿದೆ.
ಗ್ರಾಮದ ನಾಗರಾಜ(60) ಎಂಬುವವರ ಮನೆಯಲ್ಲಿ ಜಿಂಕೆ ಮಾಂಸ ಶೇಖರಿಸಿರುವ ಖಚಿತ ಮಾಹಿತಿ ಮೇರೆಗೆ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯ ಅರಣ್ಯಾಧಿಕಾರಿ ಕಾಂತರಾಜು ನೇತೃತ್ವದಲ್ಲಿ ದಾಳಿ ನಡೆಸಿ 4 ಕೆಜಿ ಜಿಂಕೆ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಈ ವೇಳೆ, ನಾಗರಾಜ ತನ್ನ ಪತ್ನಿಯೊಂದಿಗೆ ಪರಾರಿಯಾಗಿದ್ದಾನೆ.
ವನ್ಯ ಜೀವಿ ಸಂರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಶಪಡಿಸಿಕೊಂಡ ಜಿಂಕೆ ಮಾಂಸವನ್ನು ಅರಣ್ಯ ಇಲಾಖೆ ಅಧಿಕಾರಿಗಳುಬೆಂಕಿಯಲ್ಲಿ ಸುಟ್ಟು ನಾಶಪಡಿಸಿದ್ದಾರೆ. ಪರಾರಿಯಾದ ದಂಪತಿ ಪತ್ತೆಗೆ ಬಲೆ ಬೀಸಲಾಗಿದೆ.
ವರದಿ:- ಗೂಳಿಪುರ ನಂದೀಶ ಎಂ
Advertisement