ಬಂಟ್ವಾಳ: ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಮಾರಕಾಸ್ತ್ರಗಳಿಂದ ದಾಳಿ

ಬಂಟ್ವಾಳ ತಾಲೂಕಿನ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ. 
ಬಂಟ್ವಾಳ: ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಮಾರಕಾಸ್ತ್ರಗಳಿಂದ ದಾಳಿ
ಬಂಟ್ವಾಳ: ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಮಾರಕಾಸ್ತ್ರಗಳಿಂದ ದಾಳಿ

ಮಂಗಳೂರು: ಬಂಟ್ವಾಳ ತಾಲೂಕಿನ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ.

ಅಧ್ಯಕ್ಷ ರಝಾಕ್ ಕುಕ್ಕಾಜೆ ಹಲ್ಲೆಗೊಳಗಾದವರು ಎಂದು ತಿಳಿದುಬಂದಿದೆ. ಬಂಟ್ವಾಳ ತಾಲೂಕಿನ ಮಂಚಿ ಎಂಬಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ.

ರಝಾಕ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಚಿ ಗ್ರಾಮದ ಮಂಚಿ ಕಟ್ಟೆಯಲ್ಲಿರುವ ಕ್ಲಿನಿಕ್ ವೊಂದಕ್ಕೆ ಇಂದು ರಾತ್ರಿ ಬಂದಿದ್ದರು ಎನ್ನಲಾಗಿದೆ‌. ಈ ವೇಳೆ ಬೈಕ್ ನಲ್ಲಿ ಬಂದ ಮೂವರಿದ್ದ ತಂಡ ರಝಾಕ್ ರಿಗೆ ಮಾರಕಾಸ್ತ್ರ ಗಳಿಂದ ಹಲ್ಲೆ ನಡೆಸಿ ಪರಾರಿಯಾಗಿರುವುದಾಗಿ ತಿಳಿದುಬಂದಿದೆ.

ರಝಾಕ್ ಅವರ ಕೈಗಳಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಸೀದಿ ಃಆಗೂ ವೈಯುಕ್ತಿಕ ಕಾರಣಗಳಿಗೆ ಈ ಹಲ್ಲೆ ನಡೆದಿದೆ ಎನ್ನಲಾಗಿದ್ದು ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com