ಬೆಂಗಳೂರು: ನಾಪತ್ತೆಯಾಗಿದ್ದ ಪ್ರೇಮಿಗಳ ಮೃತದೇಹ ಪತ್ತೆ, ಕೊಲೆ ಶಂಕೆ 

ಪರಸ್ಪರ ಪ್ರೇಮಿಸುತ್ತಿದ್ದ ಖಾಸಗಿ ಕಂಪನಿಯ ಉದ್ಯೋಗಿಗಳಿಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ಬಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸಾವಿನ ಬಗ್ಗೆ ಅನುಮಾನ ಮೂಡಿದೆ.
ಪ್ರೇಮಿಗಳಾಗಿದ್ದ ಕೇರಳ ಮೂಲದ ಶ್ರೀಲಕ್ಷ್ಮಿ ಹಾಗೂ ಜನಾರ್ದನ್
ಪ್ರೇಮಿಗಳಾಗಿದ್ದ ಕೇರಳ ಮೂಲದ ಶ್ರೀಲಕ್ಷ್ಮಿ ಹಾಗೂ ಜನಾರ್ದನ್

ಬೆಂಗಳೂರು: ಪರಸ್ಪರ ಪ್ರೇಮಿಸುತ್ತಿದ್ದ ಖಾಸಗಿ ಕಂಪನಿಯ ಉದ್ಯೋಗಿಗಳಿಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ಬಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸಾವಿನ ಬಗ್ಗೆ ಅನುಮಾನ ಮೂಡಿದೆ.

ಎಲೆಕ್ಟ್ರಾನಿಕ್ ಸಿಟಿಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಶ್ರೀಲಕ್ಷ್ಮಿ ಹಾಗೂ ಜನಾರ್ದನ್ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ. ಇಬ್ಬರ ಮೃತ ದೇಹಗಳು ಆನೇಕಲ್‌ನ ಚಿಂತಲ ಮಡಿವಾಳ ಗ್ರಾಮದ ಕೆರೆ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. 

ಅವರಿಬ್ಬರೂ ಕಳೆದ ಒಂದೂವರೆ ತಿಂಗಳಿನಿಂದ ನಾಪತ್ತೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಶ್ರೀಲಕ್ಷ್ಮಿ ಹಾಗೂ ಜನಾರ್ದನ್ ಪೋಷಕರು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ಶೋಧ ಕಾರ್ಯ ನಡೆಸಿದ್ದರು. ಇಂದು ಚಿಂತಲ ಮಡಿವಾಳ ಗ್ರಾಮದ ಕೆಲವರು ಕೆರೆ ಬಳಿಗೆ ಹೋದಾಗ ಶವ ಕೊಳೆತ ವಾಸನೆ ಬಂದಿದೆ. ಬಳಿಕ ಸ್ಥಳಕ್ಕೆ ಹೋಗಿ ನೋಡಿದಾಗ ಮೃತದೇಹ ನೋಡಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಹೆಬ್ಬಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com