ತುಮಕೂರು: 2019ರ ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಇದೇ ಮೊದಲ ಬಾರಿಗೆ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹಾಗೂ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಅ.3 ರಂದು ತುಮಕೂರಿಗೆ ಭೇಟಿ ನೀಡಲಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯುಂಟಾಗಿದ್ದು, ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿನ ಪಕ್ಷದ ಎಲ್ಲಾ ಘಟಕಗಳನ್ನು ಪುನರ್ ರಚನೆ ಮಾಡುವ ಉದ್ದೇಶದಿಂದ ದೇವೇಗೌಡ ಅವರು ತುಮಕೂರಿಗೆ ಭೇಟಿ ನೀಡಲಿದ್ದಾರೆ.
ಪಕ್ಷವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಅ.3ರಂದು ಸಮಾವೇಶ ಕೂಡ ನಡೆಯಲಿದ್ದು, ಸಮಾವೇಶದಲ್ಲಿ ದೇವೇಗೌಡ ಅವರೊಂದಿಗೆ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಘಟಕದ ಅಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿಯವರು ಭಾಗಿಯಾಗಲಿದ್ದಾರೆ.
Advertisement