ಸುಳ್ಯ ಬಳಿ ಭೀಕರ ಅಪಘಾತ: ಕಾರಿನಲ್ಲಿದ್ದ ನಾಲ್ವರ ದುರ್ಮರಣ

ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ನಾಲ್ವರು ದಾರುಣ ಸಾವನ್ನಪ್ಪಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಸುಳ್ಯ: ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ನಾಲ್ವರು ದಾರುಣ ಸಾವನ್ನಪ್ಪಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಂಪಾಜೆ ಸಮೀಪದ ಮೊಣ್ಣಂಗೇರಿ ನಿವಾಸಿಗಳಾದ ಅಚ್ಚಯ್ಯ ಹಾಜಿ ಹಾಗೂ ಅವರ ಮಕ್ಕಳಾದ ಇಬ್ರಾಹಿಂ, ಹ್ಯಾರಿಸ್ ಮತ್ತು ಉಮ್ಮರ್ ಮೃತಪಟ್ಟಿದ್ದಾರೆ. 

ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com