ಮಂಡ್ಯ: ಮೈಸೂರು ದಸರಾಕ್ಕಾಗಿ ನಿಯೋಜನೆಗೊಂಡಿದ್ದ ಭಾರತೀಯ ವಾಯುಸೇನೆಯ ಎಂಐ 17 ಹೆಲಿಕಾಪ್ಟರ್ ಮಂಡ್ಯದ ಶ್ರೀರಂಗಪಟ್ಟಣದ ಬಳಿ ತುರ್ತು ಭೂಸ್ಪರ್ಶ ಮಾಡಿದೆ.
ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದ್ದು ಯಾವುದೇ ಜೀವಹಾನಿ ಸಂಭವಿಸಿಲ್ಲ. ತಾಂತ್ರಿಕ ದೋಷ ಸರಿಪಡಿಸಲಾಗಿದ್ದು ಹೆಲಿಕಾಪ್ಟರ್ ಮೈಸೂರಿಗೆ ತೆರಳಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Advertisement