ಧಾರವಾಡ: ಕಾರು-ಸರ್ಕಾರಿ ಬಸ್ಸು ಮುಖಾಮುಖಿ ಡಿಕ್ಕಿ: ಮೂವರು ಸಾವು

ಕಾರು ಮತ್ತು ಸರ್ಕಾರಿ ಬಸ್ಸು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ-ಗದಗ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಧಾರವಾಡ: ಕಾರು ಮತ್ತು ಸರ್ಕಾರಿ ಬಸ್ಸು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ-ಗದಗ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.

ಅಣ್ಣಿಗೇರಿ ತಾಲೂಕಿನ ಭದ್ರಾಪೂರ ಗ್ರಾಮದ ಬಳಿ ಈ ಅವಘಡ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಕೆಎಸ್ ಆರ್ ಟಿಸಿ ಬಸ್ಸು ಕೂಡ ಉರುಳಿ ಬಿದ್ದಿದೆ. 

ಕಾರು ಆಂಧ್ರ ಪ್ರದೇಶದ ಮೂಲದ್ದಾಗಿದ್ದು, ಕಾರಿನಲ್ಲಿ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಆ್ಯಂಬುಲೆನ್ಸ್ ಮೂಲಕ ಹುಬ್ಬಳ್ಳಿಯ ಕೀಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಸ್ಥಳೀಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com