ಪರಿಹಾರ ಧನ ಸಂತ್ರಸ್ತರ ಬ್ಯಾಂಕ್ ಖಾತೆಗೆ ವರ್ಗವಾಗಲಿ: ನಟ ಜಗ್ಗೇಶ್

ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ ಭೀಕರ ಪ್ರವಾಹದಿಂದ ಅಪಾರ ನಷ್ಟ ಹಾಗೂ ಪ್ರಾಣಹಾನಿಯಾಗಿದ್ದು, ಕೇಂದ್ರ ಸರ್ಕಾರ ಇನ್ನೂ ಪರಿಹಾರ ಧನ ಬಿಡುಗಡೆಗೊಳಿಸಿಲ್ಲ. ಇದೇ ವೇಳೆ ಪರಿಹಾರ ಧನ ನೀಡುವುದಾದಲ್ಲಿ ಅದು ನೇರವಾಗಿ ಸಂತ್ರಸ್ತರಿಗೆ ತಲುಪಲಿ ಎಂದು ನಟ ಜಗ್ಗೆಶ್ ಮನವಿ ಮಾಡಿದ್ದಾರೆ.
ನಟ ಜಗ್ಗೇಶ್
ನಟ ಜಗ್ಗೇಶ್

ಬೆಂಗಳೂರು: ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ ಭೀಕರ ಪ್ರವಾಹದಿಂದ ಅಪಾರ ನಷ್ಟ ಹಾಗೂ ಪ್ರಾಣಹಾನಿಯಾಗಿದ್ದು, ಕೇಂದ್ರ ಸರ್ಕಾರ ಇನ್ನೂ ಪರಿಹಾರ ಧನ ಬಿಡುಗಡೆಗೊಳಿಸಿಲ್ಲ. ಇದೇ ವೇಳೆ ಪರಿಹಾರ ಧನ ನೀಡುವುದಾದಲ್ಲಿ ಅದು ನೇರವಾಗಿ ಸಂತ್ರಸ್ತರಿಗೆ ತಲುಪಲಿ ಎಂದು ನಟ ಜಗ್ಗೆಶ್ ಮನವಿ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ವಿದೇಶ ಪ್ರವಾಸದಲ್ಲಿದ್ದ ಕಾರಣ ಪರಿಹಾರ ಧನ ಬಿಡುಗಡೆಯಾಗಿರಲಿಲ್ಲ. ಹೀಗಾಗಿ ಇನ್ನು ಎರಡು ಮೂರು ದಿನಗಳಲ್ಲಿ ಈ ಕುರಿತು ಪ್ರಧಾನಿ ನಿರ್ಧರಿಸಲಿದ್ದಾರೆ. ರಾಜ್ಯದ ಪ್ರವಾಹದ ಬಗ್ಗೆ ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಂಪೂರ್ಣ ಮಾಹಿತಿಯಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿನ್ನೆಯಷ್ಟೇ ತಿಳಿಸಿದ್ದಾರೆ

ಕೇಂದ್ರ ಸಚಿವರಾದ ಡಿ.ವಿ ಸದಾನದಂದಗೌಡ ಅವರು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿಯವರೊಡಗೂಡಿ ಸಂಪುಟ ಸಭೆಯಲ್ಲಿ ಪ್ರಧಾನಿ ಹಾಗೂ ಗೃಹ ಸಚಿವರ ಗಮನ ಸೆಳೆಯುವುದಾಗಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com