ಬೆಂಗಳೂರು: ಬಾಲಕನಿಗೆ ಕಚ್ಚಿದ ನಾಯಿ, ಮಾಲೀಕನ ವಿರುದ್ಧ ದೂರು ದಾಖಲಿಸಿದ ತಾಯಿ

ಮನೆಯ ಮುಂದೆ ಆಟವಾಡುತ್ತಿದ್ದ 12 ವರ್ಷದ ಬಾಲಕನಿಗೆ ಪಕ್ಕದ ಮನೆಯ ನಾಯಿ ಕಚ್ಚಿದ್ದು, ಬಾಲಕನ ತಾಯಿ ನಾಯಿ ಮಾಲೀಕನ ವಿರುದ್ಧ ಪೊಲೀಸರಿಗೆ ದೂರು ನೀಡಿರುವ ಘಟನೆ ಹುಳಿಮಾವುನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮನೆಯ ಮುಂದೆ ಆಟವಾಡುತ್ತಿದ್ದ 12 ವರ್ಷದ ಬಾಲಕನಿಗೆ ಪಕ್ಕದ ಮನೆಯ ನಾಯಿ ಕಚ್ಚಿದ್ದು, ಬಾಲಕನ ತಾಯಿ ನಾಯಿ ಮಾಲೀಕನ ವಿರುದ್ಧ ಪೊಲೀಸರಿಗೆ ದೂರು ನೀಡಿರುವ ಘಟನೆ ಹುಳಿಮಾವುನಲ್ಲಿ ನಡೆದಿದೆ.

ನಾಯಿ ಕಚ್ಚಿದ್ದರಿಂದ ಬಾಲಕ ಅನಿಲ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು, ನಾಯಿಯನ್ನು ರಸ್ತೆಗೆ ಬಿಟ್ಟು ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಮಾಲೀಕನ ವಿರುದ್ಧ ದೂರು ದಾಖಲಿಸಲಾಗಿದೆ.

ಅನಿಲ್ ತಾಯಿ ಮಹಾದೇವಿ ಅವರು ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ, ಕಳೆದ ಮಂಗಳವಾರ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ರಸ್ತೆಯಲ್ಲಿ ಸೈಕಲ್ ಓಡಿಸುತ್ತಿದ್ದ ಅನಿಲ್ ಕುಮಾರ್ ಮೇಲೆ ನಾಯಿ ಏಕಾಏಕಿ ದಾಳಿ ನಡೆಸಿದೆ. ಈ ವೇಳೆ ಅನಿಲ್ ಹಾಗೂ ಇತರರು ಜೋರಾಗಿ ಕೂಗಿಕೊಂಡಿದ್ದು, ನಾನು ಬಂದು ನೋಡಿದಾಗ ಮಗನ ಕಾಲಿಗೆ ಗಾಯಗಳಾಗಿದ್ದವು ಎಂದು ಮಹಿಳೆ ದೂರಿದ್ದಾರೆ.

ಎದುರಗಡೆ ಮನೆಯಲ್ಲಿರುವ ಮುನಿರಾಜು ಎಂಬುವವರು ಈ ನಾಯಿಯನ್ನು ಸಾಕಿದ್ದು, ಅದನ್ನು ಬೇಕಾಬಿಟ್ಟಿಯಾಗಿ ರಸ್ತೆಗೆ ಬಿಟ್ಟಿದ್ದರು. ಅದರ ಜೊತೆ ಯಾರೂ ಇರಲಿಲ್ಲ. ಹೀಗಾಗಿ ತನ್ನ ಮಗನ ಮೇಲೆ ದಾಳಿ ನಡೆಸಿದೆ ಎಂದು ಮಹಿಳೆ ಆರೋಪಿಸಿದ್ದಾರೆ.

ಗಾಯಗೊಂಡಿರುವ ಅನಿಲ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಾಲಕ ಪ್ರಾಣಾಪಯದಿಂದ ಪಾರಾಗಿದ್ದಾರೆ. ಆದರೆ ಸಂಪೂರ್ಣ ಗುಣಮುಖರಾಗುವವವರೆ ನಡೆಯಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ನಾವು ಕೇಸ್ ದಾಖಲಿಸಿಕೊಂಡಿದ್ದೇವೆ ಮತ್ತು ಈ ಸಂಬಂಧ ನಾಯಿ ಮಾಲೀಕ ಮುನಿರಾಜು ಅವರಿಗೆ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com