ನವದೆಹಲಿ: ಉತ್ತರ ಕರ್ನಾಟಕ ಪ್ರವಾಹ ಸಂತ್ರಸ್ತರ ಗೋಳು ಕೊನೆಗೂ ಕೇಂದ್ರ ಸರ್ಕಾರಕ್ಕೆ ಕೇಳಿಸಿದ್ದು, 60 ದಿನಗಳ ನಂತರ 1,200 ಕೋಟಿ ರೂಪಾಯಿ ಘೋಷಣೆ ಮಾಡಿದೆ.
ಎನ್ ಡಿಆರ್ ಎಫ್ ನಿಂದ ಕೇಂದ್ರ ಸರ್ಕಾರ 1,200 ಕೋಟಿ ರೂಪಾಯಿ ಮಧ್ಯಂತರ ಪರಿಹಾರ ಘೋಷಣೆ ಮಾಡಿದೆ.
ಕಾಡಿಸಿ ಬೇಡಿಸಿ, ಜನರ ಆಕ್ರೋಶದ ಕಟ್ಟೆಯೊಡೆದ ನಂತರ ರಾಜ್ಯಕ್ಕೆ ಕೇಂದ್ರ ಸರ್ಕಾರ ಮಧ್ಯಂತರ ಪರಿಹಾರ ಮೊತ್ತವನ್ನು ಘೋಷಿಸಿದೆ. ರಾಜ್ಯ ಸರ್ಕಾರ 35,000 ಕೋಟಿ ರೂಪಾಯಿ ಪರಿಹಾರ ಕೇಳಿತ್ತು. ಆದರೆ ಅಳೆದು ತೂಗಿ ಕೇಂದ್ರ ಸರ್ಕಾರ 1,200 ಕೋಟಿ ರೂಪಾಯಿ ನೀಡಿದೆ. ಇದೇ ವೇಳೆ ಬಿಹಾರ ಪ್ರವಾಹ ಸಂತ್ರಸ್ತರಿಗೆ 400 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.
Advertisement