ಧಾರವಾಡ: ಕರ್ತವ್ಯ ಲೋಪ ಎಸಗಿದ 16 ಪೊಲೀಸರು ಅಮಾನತು

ಕರ್ತವ್ಯ ಲೋಪ ಎಸಗಿದ ಆರೋಪದಡಿ 16 ಪೊಲೀಸ್ ಸಿಬ್ಬಂದಿಯನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಆರ್. ದೀಲಿಪ್ ಅಮಾನತುಗೊಳಿಸಿದ್ದಾರೆ. 
ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಆರ್. ದೀಲಿಪ್
ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಆರ್. ದೀಲಿಪ್

ಧಾರವಾಡ:  ಕರ್ತವ್ಯ ಲೋಪ ಎಸಗಿದ ಆರೋಪದಡಿ 16 ಪೊಲೀಸ್ ಸಿಬ್ಬಂದಿಯನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಆರ್. ದೀಲಿಪ್ ಅಮಾನತುಗೊಳಿಸಿದ್ದಾರೆ.

ಸೆ. 12ರಂದು ಗಣೇಶ ಮೆರವಣಿಗೆ ವೇಳೆ 9 ಜನರಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದ.

ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಆಯುಕ್ತರು ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದಾರೆ. 

ಇನ್ನು ರೌಡಿ ಶೀಟರ್ ಜತೆಗೆ ನಿಕಟ ಸಂಪರ್ಕವಿದ್ದ  ಕೆಲ ಪೋಲೀಸ್ ಸಿಬ್ಬಂದಿಗೆ ಶೋಕಾಸ್ ನೋಟೀಸ್ ನೀಡಲಾಗಿದೆ.ಇನ್ನು ಕೆಲ ಸಿಬ್ಬಂದಿಗಳು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪ ಕೇಳಿಬಂದಿದ್ದು ಈ ಕುರಿತು ತನಿಖೆ ನಡೆಯುತ್ತಿದೆ. ಒಂದೊಮ್ಮೆ ಆರೋಪ ಸಾಬೀತಾದರೆ ತಕ್ಷಣ ಕ್ರ್ಮ ತೆಗೆದುಕೊಳ್ಳುವುದಾಗಿ ಆಯುಕ್ತರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com