ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಜಗಳ, ಯುವಕನ ಕೊಲೆ

ಉದ್ಯಾನವನದಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಾಜಿನಗರದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಬೆಂಗಳೂರು: ಉದ್ಯಾನವನದಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಾಜಿನಗರದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಮಹಾಲಕ್ಷ್ಮೀ ಲೇಔಟ್‌ ನಿವಾಸಿ ಪ್ರಣವ್ (28) ಹತ್ಯೆಗೀಡಾದವರು. ಮಂಗಳವಾರ ರಾತ್ರಿ 7.30ರ ವೇಳೆ ಮನೆಯಿಂದ ರಾಜಾಜಿನಗರದ ಕೈಗಾರಿಕಾ ಪ್ರದೇಶದ ಉದ್ಯಾನವನಕ್ಕೆ ಪ್ರಣವ್ ವಾಯುವಿಹಾರಕ್ಕೆ ತೆರಳಿದ್ದರು. ಅಲ್ಲಿ ದುಷ್ಕರ್ಮಿಗಳ ತಂಡ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರಣವ್‌ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ನಂತರ, ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ.

ಕೊಲೆ ಮಾಡಿದವರು ಯಾರು, ಏಕಾಗಿ ಕೊಲೆಯಾಗಿದೆ ಎನ್ನುವುದು ಇನ್ನೂ ತಿಳಿದಿಲ್ಲ ಎಂದು ಪೋಲೀಸರು ಹೇಳಿದ್ದು ಘಟನೆ ಸಂಬಂಧ ಮಾಗಡಿರಸ್ತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com