ವಾಹನ ಸವಾರರೇ ಎಚ್ಚರ, ನಗರದಲ್ಲಿ 2 ಬೃಹತ್ ಪ್ರತಿಭಟನೆ: ಸಿಟಿಯಲ್ಲಿ ಸಂಚಾರ ದಟ್ಟಣೆ 

ನೆರೆ ಸಂತ್ರಸ್ತರಿಗೆ ಪರಿಹಾರ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ರೈತ ಸಂಘ ಮತ್ತು ಜೆಡಿಎಸ್‌ ಪಕ್ಷ ಗುರುವಾರ ಪ್ರತಿಭಟನೆ  ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತಮುತ್ತ ಸಂಚಾರ ವ್ಯವಸ್ಥೆ ಬದಲಾವಣೆ ಮಾಡಲಾಗಿದ್ದು,
ವಿಧಾನಸೌಧ
ವಿಧಾನಸೌಧ

ಬೆಂಗಳೂರು:  ನೆರೆ ಸಂತ್ರಸ್ತರಿಗೆ ಪರಿಹಾರ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ರೈತ ಸಂಘ ಮತ್ತು ಜೆಡಿಎಸ್‌ ಪಕ್ಷ ಗುರುವಾರ ಪ್ರತಿಭಟನೆ  ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತಮುತ್ತ ಸಂಚಾರ ವ್ಯವಸ್ಥೆ ಬದಲಾವಣೆ ಮಾಡಲಾಗಿದ್ದು, ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸಾರ್ವಜನಿಕರಿಗೆ ಪೊಲೀಸರು ಕೋರಿದ್ದಾರೆ.

ಉತ್ತರ ಕರ್ನಾಟಕಕ್ಕೆ ಪ್ರವಾಹ ಪರಿಹಾರಕ್ಕೆ ಆಗ್ರಹಿಸಿ ಬೀದಿಗೆ ಇಳಿಯಲಿದ್ದಾರೆ. ಇನ್ನೊಂದಡೆ ಜೆಡಿಎಸ್ ಕೂಡ ಪ್ರತಿಭಟನೆ ನಡೆಸಲಿದೆ. ಸುಮಾರು ಐದು ಸಾವಿರಕ್ಕೂ ಹೆಚ್ಚು ರೈತರು ಇಂದು ಹನ್ನೊಂದು ಗಂಟೆಗೆ ಸಂಗೊಳ್ಳಿ ರಾಯಣ್ಣ ವೃತ್ತದಿಂದ ವಿಧಾನಸೌಧ ಮುತ್ತಿಗೆ ಹಾಕಲಿದ್ದಾರೆ.

ಜೆಡಿಎಸ್ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಹನ್ನೊಂದು ಗಂಟೆಗೆ ಜೆಪಿ ಭವನದಿಂದ ಫ್ರೀಡಂಪಾರ್ಕ್ ವರೆಗೆ ಪ್ರತಿಭಟನೆ ನಡೆಸಲಿದ್ದಾರೆ. ಪ್ರತಿಭಟನೆ ಎಫೆಕ್ಟ್ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಲಿದೆ. ಅಧಿವೇಶನ ಹಿನ್ನೆಲೆ ವಿಧಾನಸೌಧ ಸುತ್ತಮುತ್ತ 2 ಕಿ.ಮೀ. ನಿಷೇದಾಜ್ಞೆಯೂ ಜಾರಿಯಾಗಲಿದೆ.

1. ಮಂತ್ರಿಮಾಲ್ ರಸ್ತೆ,
2. ಶೇಷಾದ್ರಿಪುರಂ ರೋಡ್
3. ಮೆಜೆಸ್ಟಿಕ್ ಸುತ್ತಾಮುತ್ತ ರಸ್ತೆ
4. ಕಾರ್ಪೋರೇಷನ್ ಸರ್ಕಲ್
5. ವಿಧಾನಸೌಧ ಸುತ್ತಾಮುತ್ತ ರಸ್ತೆ
6. ಆನಂದ್ ರಾವ್ ಸರ್ಕಲ್ ಬಳಿ ಟ್ರಾಫಿಕ್  ಇರಲಿದೆ.

ಶೇಷಾದ್ರಿ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ, ಆನಂದ ರಾವ್ ಫ್ಲೈಓವರ್ ಬಳಿ ಎಡ ತಿರುವು ಪಡೆದು ರೇಸ್ ಕೋರ್ಸ್ ರಸ್ತೆ ಕಡೆ ಸಂಚಾರಿಸಲು ಮಾರ್ಗ ಬದಲು, ಸಿಐಡಿ ಜಂಕ್ಷನ್, ಪ್ಯಾಲೇಸ್ ರಸ್ತೆ ಮೂಲಕ ಕೆ ಆರ್ ಸರ್ಕಲ್ ಪ್ರವೇಶಿಸಲು ಸೂಚಿಸಲಾಗಿದೆ.

ಉತ್ತರ ಕರ್ನಾಟಕದ ಪ್ರವಾಹ ದಲ್ಲಿ ಮನೆ ಕಳಕೊಂಡವರಿಗೆ ಹತ್ತು ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಬೇಕು. ಎಕರೆಗೆ ಇಪ್ಪತ್ತೈದು ಸಾವಿರದಂತೆ ಪರಿಹಾರ ಕೊಡಬೇಕು. ಪ್ರವಾಹದಲ್ಲಿ ಪ್ರಾಣ ಕಳಕೊಂಡವರಿಗೆ 25 ಲಕ್ಷ ಪರಿಹಾರ ಕೊಡಬೇಕು.ನಷ್ಟವಾದ ಕೃಷಿ ಭೂಮಿಗೆ ಪರಿಹಾರ ಕೊಡಬೇಕು, ಪರ್ಯಾಯ ಭೂಮಿ ಕೊಡಬೇಕು. ಪದೇ ಪದೇ ಪ್ರವಾಹಕ್ಕೆ ತುತ್ತಾಗುವ ಗ್ರಾಮವನ್ನು ಸಂಪೂರ್ಣ ಸ್ಥಳಾಂತರ ಮಾಡಬೇಕು. ಬ್ಯಾಂಕ್ ಗಳು ಪ್ರವಾಹದಿಂದ ತೊಂದರೆಗೆ ಒಳಗಾದ ರೈತರಿಗೆ ಸಾಲದ ನೋಟಿಸ್ ನೀಡೋದನ್ನು ನಿಲ್ಲಿಸಬೇಕು ಎಂಬ ಬೇಡಿಕೆಗಳನ್ನಿಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com