ಭಾರೀ ಮಳೆಗೆ ಒಡೆದ ದೊಡ್ಡಬಿದರಕಲ್ಲು ಕೆರೆ: ನೀರಿನ ಮಟ್ಟ ಕಂಡು ಭೀತಿಗೊಳಗಾದ ಜನತೆ

ನಗರದಲ್ಲಿ ಬುಧವಾರ ರಾತ್ರಿ ಸುರಿದ ಭಾರಿೀ ಮಳೆಗೆ ದೊಡ್ಡಬಿದರಕಲ್ಲು ಕೆರೆ ಕೋಡಿ ಒಡೆದು ಸುಮಾರು 500ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ನೀರಿನ ಮಟ್ಟ ಕಂಡ ಜನತೆ ಭೀತಿಗೊಳಗಾಗಿದ್ದಾರೆ. 
ಭಾರೀ ಮಳೆಗೆ ಒಡೆದ ದೊಡ್ಡಬಿದರಕಲ್ಲು ಕೆರೆ: ನೀರಿನ ಮಟ್ಟ ಕಂಡು ಭೀತಿಗೊಳಗಾದ ಜನತೆ
ಭಾರೀ ಮಳೆಗೆ ಒಡೆದ ದೊಡ್ಡಬಿದರಕಲ್ಲು ಕೆರೆ: ನೀರಿನ ಮಟ್ಟ ಕಂಡು ಭೀತಿಗೊಳಗಾದ ಜನತೆ

ಬೆಂಗಳೂರು: ನಗರದಲ್ಲಿ ಬುಧವಾರ ರಾತ್ರಿ ಸುರಿದ ಭಾರಿೀ ಮಳೆಗೆ ದೊಡ್ಡಬಿದರಕಲ್ಲು ಕೆರೆ ಕೋಡಿ ಒಡೆದು ಸುಮಾರು 500ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ನೀರಿನ ಮಟ್ಟ ಕಂಡ ಜನತೆ ಭೀತಿಗೊಳಗಾಗಿದ್ದಾರೆ. 

ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆ ಬಳಕೆಯ ವಸ್ತುಗಳು ಸೇರಿದಂತೆ 100ಕ್ಕೂ ಹೆಚ್ಚು ವಾನಹಗಳಿಗೆ ಹಾನಿಯಾಗಿವೆ. 8ನೇ ಮೈಲಿ ಬಳಿಯ ದೊಡ್ಡ ಬಿದರಕಲ್ಲು ಕೆರೆ ತುಂಬಿ ಕೋಡಿ ಒಡೆದು ಯಶವಂತಪುರ ವಿಧಾನಸಭಾ ಕ್ಷೇತ್ರದ ಭವಾನಿ ನಗರ, ಅನ್ನಪೂರ್ಣೇಶ್ವರಿ ಲೇಔಟ್, ಮುನೇಶ್ವರ ಲೇಔಟ್ ಹಾಗೂ ಅಂದಾನಪ್ಪ ಲೇಔಟ್ನ ತಗ್ಗು ಪ್ರದೇಶಗಳು ಜಲಾವೃತಗೊಂಡು ಅಕ್ಷರಶಃ ದ್ವೀಪಗಳಾಗಿ ರೂಪುಗೊಂಡಿದ್ದವು. ಬಡಾವಣೆಯ ರಸ್ತೆಗಳು ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದ್ದು, ನಡು ರಸ್ತೆಗಳಲ್ಲಿ ದೊಡ್ಡ ಕಂದಕಗಳೇ ಸೃಷ್ಟಿಯಾಗಿವೆ. 

ಸುಮಾರು 500ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಕಾರು, ಬೈಕ್ ಹಾಗೂ ಆಟೋ ಸೇರಿದಂತೆ ಸುಮಾರು 100ಕ್ಕೂ ಹೆಚ್ಚು ವಾಹನಗಳು ನೀರಿನಲ್ಲಿ ಮುಳುಗಿ ನಾಶವಾಗಿವೆ. ಮನೆಗಳಿಗೆ ಏಕಾಏಕಿ ನೀರು ನುಗ್ಗಿದ ಪರಿಣಾಮ ಮನೆಯಲ್ಲಿ ಬಟ್ಟೆ, ಪಾತ್ರೆ, ದಿನಸಿ ವಸ್ತುಗಳು, ಟಿವಿ, ಫ್ರಿಡ್ಜ್, ವಾಷಿಂಗ್ ಮಿಷನ್ ಸೇರಿದಂತೆ ಇನ್ನಿತರೆ ಎಲೆಕ್ಟ್ರಾನಿಕ್ ವಸ್ತುಗಳು ನೀರು ಪಾಲಾಗಿವೆ. ಬುಧವಾರ ರಾತ್ರಿ ಇಡೀ ನಿವಾಸಿಗಳು ಮನೆಯಿಂದ ನೀರು ಹೊರ ಹಾಕುವುದಕ್ಕೆ ಹರಸಾಹಸ ಪಡಬೇಕಾಯಿತು. 41 ಎಕರೆಯ ದೊಡ್ಡಬಿದರಕಲ್ಲು ಕೆರೆ ಕೋಡಿ ನೀರು ಬಡಾವಣೆಗಳಿಗೆ ನುಗ್ಗಿತ್ತು. 8 ಜೆಸಿಬಿಗಳಿಂದ ತಾತ್ಕಾಲಿಕ ತಡೆಗೋಡೆ ನಿರ್ಮಿಸಿ ಕೋಡಿ ನೀರು ಮಾದವಾರ ಕೆರೆ ಹೋಗುವಂತೆ ಮಾಡಲಾಗಿದೆ. 

ದೊಡ್ಡಬಿದರಕಲ್ಲು ಪ್ರವಾಹ ಪ್ರದೇಶಕ್ಕೆ ಗುರುವಾರ ಬೆಳಿಗ್ಗೆ ಬೇಟಿ ನೀಡಿ ಬಿಬಿಎಂಪಿ ಮೇಯರ್ ಪರಿಶೀಲನೆ ನೀಡೆಸಿದರು. 

ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಹಾಗೂ ಆಯುಕ್ತ ಬಿ.ಹೆಚ್. ಅನಿಲ್ ಕುಮಾರ್ ಅವರು ಭೇಟಿ ನೀಡಿ ಸಂತ್ರಸ್ತರಿಂದ ಅಹವಾಲು ಸ್ವೀಕರಿಸಿದರು. 

ಪ್ರವಾಹ ಉಂಟಾದ ಭವಾನಿ ನಗರ, ಅನ್ನಪೂರ್ಣೇಶ್ವರಿ ಲೇಔಟ್, ಮುನೇಶ್ವರ ಲೇಔಟ್ ಹಾಗೂ ಅಂದಾನಪ್ಪ ಲೇಔಟ್ ನಲ್ಲಿ ಸುಮಾರು 100ಕ್ಕೂ ಹೆಚ್ಚು ವಾಹನಗಳು ಹಾನಿಗೊಳಗಾಗಿವೆ. ಈ ಹಿನ್ನಲೆಯಲ್ಲಿ ವಿಮಾ ಕಂಪನಿಗಳು ಸ್ಥಳಕ್ಕೆ ಭೇಟಿ ನೀಡಿ ಅಲ್ಲೇ ತಪಾಸಣೆ ಮಾಡುವುದಕ್ಕೆ ಸೂಚನೆ ನೀಡಲಾಗುವುದು. ಇನ್ನು ಮನೆಗಳಿಗೆ ನೀರು ನುಗ್ಗಿ ಮನೆಯಲ್ಲಿರುವ ವಸ್ತುಗಳು ಹಾನಿಗೊಳಗಾಗಿರುವ ಬಗ್ಗೆ ಪಾಲಿಕೆಯ ಕಂದಾಯ ಅಧಿಕಾರಿಗಳು ಅಂದಾಜು ಮಾಡಿ ವರದಿ ನೀಡಲಿದ್ದಾರೆ. ನಂತರ ನಿಯಮದ ಪ್ರಕಾರ ಪರಿಹಾರ ನೀಡಲಾಗುತ್ತದೆ ಎಂದು ಆಯುಕ್ತರು ತಿಳಿಸಿದ್ದಾರೆ. 

ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲಾಗುತ್ತದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಬಿಡಬ್ಲ್ಯೂಎಸ್ಎಸ್'ಬಿಯನ್ನು ದೂಷಿಸುವಂತಿಲ್ಲ. ಬಿಬಿಎಂಪಿ ದಂಡವನ್ನು ವಿಧಿಸುವುದಿಲ್ಲ. ಹಾನಿಗೊಳಗಾಗಿರುವ ಪ್ರದೇಶಗಳನ್ನು ಸರಿಪಡಿಸುವಲ್ಲಿ ಬಿಬಿಎಂಪಿ ಕೆಲಸ ಮಾಡಲಿದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com