ಸಾರಿಗೆ ಬಸ್ ಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಮೂವರ ದುರ್ಮರಣ

ಸಾರಿಗೆ ಬಸ್​ ಹಾಗೂ ಸರಕು ವಾಹನ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಕೂಡ್ಲಿಗಿ ಹೊರವಲಯದ ಶಿವಪುರ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬಳ್ಳಾರಿ: ಸಾರಿಗೆ ಬಸ್​ ಹಾಗೂ ಸರಕು ವಾಹನ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಕೂಡ್ಲಿಗಿ ಹೊರವಲಯದ ಶಿವಪುರ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಅಪಘಾತ ಸಂಭವಿಸಿದ್ದು, ಚಾಲಕ ಪ್ರಕಾಶ್​ (35) ನಾಗರಾಜ್​ (60) ನಾಗಮ್ಮ (30) ಮೃತಪಟ್ಟ‌ ದುರ್ದೈವಿಗಳು. ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ಬಳ್ಳಾರಿಯ ಗುರು ಎಂಬುವವರನ್ನು ಬಳ್ಳಾರಿಯ ವಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com