ಉಡುಪಿ: ಉಡುಪಿ ಜಿಲ್ಲೆ ಕಾಪು ತಾಲೂಕಿನ ಶಿರ್ವದ ಡಾನ್ ಬಾಸ್ಕೊ ಶಾಲೆಯ ಪ್ರಾಂಶುಪಾಲ ಮಹೇಶ್ ಡಿಸೋಜಾ (36) ಶಾಲಾ ಆವರಣದಲ್ಲೇ ನೇಣಿಗೆ ಶರಣಾಗಿದ್ದಾರೆ.
ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು ಶಾಲೆಯ ಕ್ಯಾಬಿನ್ ಒಳಗೆ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಅದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಹೇಳಲಾಗಿದೆ.
ಉಡುಪಿ ಕ್ರೈಸ್ತ ಸಮುದಾಯದ ಈ ಭಾಗದ ಧರ್ಮಗುರುವೂ ಆಗಿದ್ದ ಮಹೇಶ್ ಡಿಸೋಜಾ ಮೂಲತಃ ಮೂಡಬೆಳ್ಳೆ ಗ್ರಾಮದವರಾಗಿದ್ದಾರೆ. ಇವರು 2013ರಲ್ಲಿ ಧರ್ಮಗುರು ದೀಕ್ಷೆ ಹೊಂದಿದ್ದರು.
ಆರೋಗ್ಯ ಮಾತಾ ಇಗರ್ಜಿ ಆಡಳಿತ ಡಾನ್ ಬಾಸ್ಕೊ ಶಾಲೆಯಲ್ಲಿ ಸಿಬಿಎಸ್ ಸಿ ಪಠ್ಯಕ್ರಮ ಅಳವಡಿಕೆಗೆ ಇವರ ಪಾತ್ರ ಮಹತ್ವದ್ದಾಗಿತ್ತು. ಅಪಾರ ಜನಮೆಚ್ಚುಗೆ ಗಳಿಸಿದ್ದ ಮಹೇಶ್ ಡಿಸೋಜಾ ಅವರ ಈ ನಿರ್ಧಾರ ಸಾರ್ವಜನಿಕರಲ್ಲಿ ತೀವ್ರ ನೋವು ತಂದಿದೆ.
ಘಟನೆ ಸಂಬಂಧ ಶಿರ್ವ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement