ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಐಟಿ ದಾಳಿಯ ಹಿಂದೆ ಕೇಂದ್ರ ಸರ್ಕಾರದ ಪಾತ್ರವಿಲ್ಲ. ಎನ್ ಡಿಎ ವಿರುದ್ಧ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕೇಂದ್ರ ಸಚಿವ ಡಾ ಹರ್ಷವರ್ಧನ್ ಅವರು ಹೇಳಿದ್ದಾರೆ.
ಇಂದು ಮೈಸೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು, ತೆರಿಗೆ ಇಲಾಖೆಯು ಸ್ವಾಯತ್ತ ಸಂಸ್ಥೆಯಾಗಿದ್ದು, ಮಾಜಿ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಅಥವಾ ಬೇರಾವುದೇ ರಾಜಕೀಯ ನಾಯಕರ ನಿವಾಸದ ಮೇಲೆ ದಾಳಿ ನಡೆಸುವ ಹಕ್ಕು ಹೊಂದಿದೆ ಎಂದು ಸ್ಪಷ್ಟಪಡಿಸಿದರು.
ಐಟಿ ದಾಳಿಯ ಹಿಂದೆ ಕೇಂದ್ರ ಸರ್ಕಾರದ ಪಾತ್ರ ಇದೆ. ಕೇಂದ್ರ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸುವುದು ಆಧಾರ ರಹಿತ ಎಂದು ಅವರು ಹೇಳಿದ್ದಾರೆ.
ಐಟಿ ಹಾಗೂ ಇನ್ನಿತರ ಸ್ವಾಯತ್ತ ಸಂಸ್ಥೆಗಳು ತಮ್ಮ ಕರ್ತವ್ಯ ನಿರ್ವಹಿಸುವಾಗ ಕೇಂದ್ರ ಸರ್ಕಾರ ಮೂಗು ತೂರಿಸುವುದಿಲ್ಲ. ಹೀಗಾಗಿ ವಿಪಕ್ಷದ ಆರೋಪಕ್ಕೆ ಪ್ರತಿಕ್ರಿಯಿಸುವುದೂ ಸಹ ಸಮಯ ವ್ಯರ್ಥ ಮಾಡಿದಂತೆ ಎಂದು ಹರ್ಷವರ್ಧನ್ ತಿಳಿಸಿದರು.
Advertisement