ವಿಜಯಪುರ: ಮನೆಯಿಂದ ಕಾಣೆಯಾಗಿದ್ದ ಯುವತಿಯೋರ್ವಳ ಶವ ಮನೆಯ ಮುಂದಿನ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ವಿಜಯಪುರ ನಗರದ ವಿವೇಕ ನಗರದ ಮನೆಯ ಮುಂದಿನ ಟ್ಯಾಂಕ್ ನಲ್ಲಿ ರುಕ್ಮಿಣಿ ಉಪ್ಪಲದಿನ್ನಿ(24) ಅವರ ಶವವಾಗಿ ಪತ್ತೆಯಾಗಿದೆ.
ಕಳೆದ ರವಿವಾರ ಮನೆಯಿಂದ ರುಕ್ಮಿಣಿ ಉಪ್ಪಲದಿನ್ನಿ ಮನೆಯಿಂದ ಕಾಣೆಯಾಗಿದ್ದಾಳೆ ಎಂದು ಆಕೆಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾದ ಹಿನ್ನೆಲೆಯಲ್ಲಿ ರುಕ್ಮಿಣಿಯನ್ನು ಕೊಲೆ ಮಾಡಲಾಗಿದೆ ಎಂದು ಆಕೆಯ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಜಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Advertisement