ಬೆಂಗಳೂರು: ಹೆಬ್ಬಾಳ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಮೇಲೆ ಹೆಗೆ ಯತ್ನಿಸಿದ ವ್ಯಕ್ತಿಯನ್ನು ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ.
ಕೆ.ಆರ್ ಪುರಂ ನ ಬೈರತಿಯಲ್ಲಿರುವ ಸುರೇಶ್ ಅವರ ಮನೆ ಮುಂದೆ ಆರೋಪಿ ತನ್ನ ಬೈಕ್ ನಿಂದ ಕಾರಿಗೆ ಗುದ್ದಿದ್ದಾನೆ, ನಂತರ ಸುರೇಶ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ.
ಸಮಯಕ್ಕೆ ಸರಿಯಾಗಿ ಗನ್ ಮ್ಯಾನ್ ಗಳು ಬಂದು ಆರೋಪಿಯನ್ನು ಹಿಡಿದಿದ್ದಾರೆ, ಸ್ಥಳಕ್ಕೆ ಕೊತ್ತನೂರು ದಿಣ್ಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹತ್ಯೆಗೆ ಯತ್ನಿಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಈ ಸಂಬಂಧ ಸ್ಪಷ್ಟನೆ ನೀಡಿರುವ ಸುರೇಶ್ ಆ ವ್ಯಕ್ತಿ ನನ್ನ ಮೇಲೆ ಏಕೆ ಹಲ್ಲೆ ಮಾಡಿದರು ಎಂಬುದು ನನಗೆ ಗೊತ್ತಿಲ್ಲ, ನನಗೆ ಯಾರೋಂದಿಗೂ ವಯಕ್ತಿಕ ದ್ವೇಷ ವಿಲ್ಲ, ಪೊಲೀಸರು ಈ ಸಂಬಂಧ ಸೂಕ್ತ ತನಿಖೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.
Advertisement