ಮಂಡ್ಯ: ನಡು ರಸ್ತೆಯಲ್ಲೇ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ನಡೆದಿದೆ.
ಮೆಳ್ಳಹಳ್ಳಿಯ ನವೀನ್ (30) ಮೃತ ಯುವಕನೆಂದು ಗುರ್ತಿಸಲಾಗಿದೆ. 6 ಮಂದಿ ಇದ್ದ ದುಷ್ಕರ್ಮಿಗಳ ತಂಡ ಲಾಂಗು ಮಚ್ಚಿನಿಂದ ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ಸಿನಿಮೀಯ ರೀತಿಯಲ್ಲಿ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.
ಹಳೇ ವೈಷಮ್ಯ ಹಿನ್ನಲೆಯಲ್ಲಿ ಹತ್ಯೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
- ನಾಗಯ್ಯ
Advertisement