ಪೊಲೀಸರಿಗೆ ದೀಪಾವಳಿ ಬಂಪರ್; ಔರಾದ್ಕರ್ ವರದಿ ಜಾರಿಗೆ ಬಿಎಸ್ ವೈ ಸರ್ಕಾರ ಆದೇಶ

ರಾಜ್ಯ ಪೊಲೀಸರಿಗೆ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ದೀಪಾವಳಿ ಹಬ್ಬಕ್ಕೆ ಬಂಪರ್ ಉಡುಗೊರೆ ನೀಡಿದ್ದು, ರಾಜ್ಯ ಪೊಲೀಸರ ಬಹುದಿನಗಳ ಬೇಡಿಕೆಯಾದ ರಾಘವೇಂದ್ರ ಔರಾದ್ಕರ್ ವರದಿ ಜಾರಿಗೆ ಆದೇಶ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯ ಪೊಲೀಸರಿಗೆ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ದೀಪಾವಳಿ ಹಬ್ಬಕ್ಕೆ ಬಂಪರ್ ಉಡುಗೊರೆ ನೀಡಿದ್ದು, ರಾಜ್ಯ ಪೊಲೀಸರ ಬಹುದಿನಗಳ ಬೇಡಿಕೆಯಾದ ರಾಘವೇಂದ್ರ ಔರಾದ್ಕರ್ ವರದಿ ಜಾರಿಗೆ ಆದೇಶ ನೀಡಿದೆ.

2016 ರ ಜೂನ್​ 21ರಂದು ಔರಾದ್ಕರ್ ಸಮಿತಿ ರಚನೆ ಮಾಡಿ, ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಔರಾದ್ಕರ್ ವರದಿಗೆ ಮೈತ್ರಿ ಸರ್ಕಾರ ಅಂಕಿತ ಹಾಕಿ, ಆಗಸ್ಟ್​ 1ರಿಂದ ಅನ್ವಯವಾಗುವಂತೆ ಆದೇಶ ಹೊರಡಿಸಿತ್ತು. ಆದರೆ ಸರ್ಕಾರದ ಮುಂದಿನ ಆದೇಶ ಬರುವವರೆಗೆ ಕಾಯುವಂತೆ ಎಡಿಜಿಪಿ ಸೂಚಿಸಿದ್ದರು.

ಸದ್ಯ ವರದಿ ಶಿಫಾರಸ್ಸಿನಂತೆ ವೇತನವನ್ನು ಉನ್ನತೀಕರಿಸಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ಈ ಆದೇಶ 2019ರ ಆಗಸ್ಟ್​ 1 ರಿಂದಲೇ ಜಾರಿಯಾಗಿದೆ.

2016 ರ ಜೂನ್​ 21ರಂದು ಅಂದುಎಡಿಜಿಪಿಯಾಗಿದ್ದ ರಾಘವೇಂದ್ರ ಔರಾದ್ಕರ್ ಸಮಿತಿ ರಚನೆ ಮಾಡಿ, ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಔರಾದ್ಕರ್ ವರದಿಗೆ ಮೈತ್ರಿ ಸರ್ಕಾರ ಅಂಕಿತ ಹಾಕಿ,ಆಗಸ್ಟ್​ 1 ರಿಂದ ಅನ್ವಯವಾಗುವಂತೆ ಪರಿಷ್ಕೃತ ವೇತನ ಜಾರಿಗೆ ಆದೇಶ ಹೊರಡಿಸಿತ್ತು.ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದ ಬಳಿಕ ಹಿಂದಿನ ಆದೇಶಕ್ಕೆ ತಡೆ ಹಿಡಿದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com