ಕಮಲೇಶ್ ತಿವಾರಿ
ಕಮಲೇಶ್ ತಿವಾರಿ

ಕಮಲೇಶ್ ತಿವಾರಿ ಹತ್ಯೆ: ಹುಬ್ಬಳ್ಳಿಯ ಮುಸ್ಲಿಂ ಮುಖಂಡರೊಬ್ಬರ ವಿಚಾರಣೆ

ಉತ್ತರ ಪ್ರದೇಶದ ಹಿಂದೂ ಸಮಾಜ ಪಾರ್ಟಿ ಮುಖ್ಯಸ್ಥ ಕಮಲೇಶ್ ತಿವಾರಿ ಹತ್ಯೆ  ಪ್ರಕರಣಕ್ಕೆ ಹುಬ್ಬಳ್ಳಿಯ ನಂಟಿರುವ ಶಂಕೆ ವ್ಯಕ್ತವಾಗಿದೆ.

 ಹುಬ್ಬಳ್ಳಿ: ಉತ್ತರ ಪ್ರದೇಶದ ಹಿಂದೂ ಸಮಾಜ ಪಾರ್ಟಿ ಮುಖ್ಯಸ್ಥ ಕಮಲೇಶ್ ತಿವಾರಿ ಹತ್ಯೆ  ಪ್ರಕರಣಕ್ಕೆ ಹುಬ್ಬಳ್ಳಿಯ ನಂಟಿರುವ ಶಂಕೆ ವ್ಯಕ್ತವಾಗಿದೆ.

ಕಮಲೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಭಳ್ಳಿಯ ಸ್ಥಳೀಯ ಮುಖಂಡ ಮೊಹಮ್ಮದ್ ಜಾಪರ್ ಸಾದಿಕ್  ಎಂಬಾತನನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಉತ್ತರ ಪ್ರದೇಶದಲ್ಲಿ ನಡೆದಿರುವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾದಿಕ್ ಅವರನ್ನು ವಿಚಾರಣೆ ನಡೆಸಲಾಗಿದೆ. ಆದರೆ, ಬಂಧಿಸಿಲ್ಲ. ಸಾದಿಕ್ ನಿಷೇಧಿತ ಸಿಮಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿರುವುದು ಸತ್ಯಕ್ಕೆ ದೂರವಾಗಿದೆ.ಯುವ ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ಸ್ಥಳೀಯ ಮುಖಂಡರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com