ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ಶುಕ್ರವಾರ ವೇಗವಾಗಿ ಬಂದ ಕಾರು ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಮೂವರು ಸಾವನ್ನಪ್ಪಿದ್ದು. ಇಬ್ಬರು ಗಾಯಗೊಂಡಿದ್ದಾರೆ.
ಚಾಲಕ ತೀಕ್ಷ್ಣ ತಿರುವು ತೆಗೆದುಕೊಳ್ಳುವಾಗ ನಿಯಂತ್ರಣ ಕಳೆದುಕೊಂಡಾಗ ಈ ಘಟನೆ ಸಂಭವಿಸಿದೆ.ವಾಹನ ಕಂದಕಕ್ಕೆ ಬಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಯಶೋಧಾ (82), ಪ್ರಕಾಶ್ (61), ಅನಿರುದ್ಧ್ (24) ಎಂದು ಗುರುತಿಸಲಾಗಿದೆ.
ಮೃತರು ಬೆಂಗಳೂರಿನ ನಿವಾಸಿಗಳಾಗಿದ್ದು, ಅನುರೂಪಾ (19) ಮತ್ತು ನರಸಿಂಹರಾವ್ (91) ಎನ್ನುವವರು ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತಂತೆ ಬಣಕಲ್ ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ
Advertisement