ರಾಜ್ಯದಲ್ಲಿ ಎನ್ಆರ್'ಸಿ ಖಚಿತ: ಗೃಹ ಸಚಿವ ಸ್ಪಷ್ಟನೆ

ರಾಜ್ಯದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಅಭಿಯಾನ (ಎನ್ಆರ್'ಸಿ) ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. 
ಬಸವರಾಜ್ ಬೊಮ್ಮಾಯಿ
ಬಸವರಾಜ್ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಅಭಿಯಾನ (ಎನ್ಆರ್'ಸಿ) ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. 

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಈಗಾಗಲೇ ನಾನು ಈ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಕರ್ನಾಟಕದಲ್ಲಿ ಎನ್ಆರ್'ಸಿ ಜಾರಿ ಖಚಿತ. ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಈಗಾಗಲೇ ಅಕ್ರಮ ವಲಸಿಗರ ಕುರಿತು ಮಾಹಿತಿ ಸಂಗ್ರಹಿಸಲಾಗಿದ್ದು, ವರದಿಯನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಲಾಗಿದೆ. ರಾಜ್ಯದ ಪ್ರಾಮಾಣಿಕ ನಾಗರೀಕರಿಗೆ ಯಾವುದೇ ರೀತಿಯ ಸಮಸ್ಯೆಯಿಲ್ಲ. ಅಕ್ರಮ ವಲಸಿಗರು ಹಾಗೂ ರಾಜ್ಯದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳ ಕುರಿತು ಮತ್ತಷ್ಟು ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ಹೇಳಿದ್ದಾರೆ. 

ಸೈಬರ್ ಅಪರಾಧಗಳು, ಆರ್ಥಿಕ ಅಪರಾಧಗಳು ಮತ್ತು ಮಾದಕವಸ್ತುಗಳ ವಿರುದ್ಧ ಹೋರಾಡಲು ಮಂಗಳೂರು ಮತ್ತು ಉಡುಪಿಯಲ್ಲಿ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com