ಬಳ್ಳಾರಿಯಲ್ಲಿ ಭೀಕರ ರಸ್ತೆ ಅಪಘಾತ: ಮೂವರ ಸಾವು

ಬೊಲೆರೊ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಬಾಬಯ್ಯ ಕ್ರಾಸ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬಳ್ಳಾರಿ: ಬೊಲೆರೊ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಬಾಬಯ್ಯ ಕ್ರಾಸ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ
.
ಮೃತರನ್ನು ಬುಸ್ಸಿ (21), ದಾದಾ ಕಲಂದರ (31), ಅಸ್ಲಂ (25) ಎಂದು ಗುರುತಿಸಲಾಗಿದ್ದು, ಮೃತರೆಲ್ಲರೂ ಸಂಡೂರು ತಾಲೂಕಿನ ಯಶವಂತನಗರದ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ದುರ್ಘಟನೆಯಲ್ಲಿ ಪರಶುರಾಮ (28) ಮತ್ತು ಮನ್ಸೂರ್ (30) ಎಂಬುವವರು ಗಾಯಗೊಂಡಿದ್ದು, ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ .

ಘಟನೆಗೆ ಸಂಬಂಧಿಸಿದಂತೆ  ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com