ಬೆಂಗಳೂರು: ನಾಡಿನೆಲ್ಲೆಡೆ ದೀಪಾವಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ, ಇದೇ ವೇಳೆ ಡಿಸಿಎಂ ಅಶ್ವತ್ಥ್ ನಾರಾಯಣ್ ಟಿಪ್ಪು ವಿರುದ್ಧ ಕಿಡಿ ಕಾರಿದ್ದು, 260 ವರ್ಷಗಳ ಹಿಂದೆ ನಡೆದಿದ್ದ ಘಟನೆಯನ್ನ ತಮ್ಮ ಫೇಸ್ಬುಕ್ ಪೇಜ್ನಲ್ಲಿ ಪ್ರಸ್ತಾಪಿಸಿದ್ದಾರೆ.
2 ಶತಮಾನಗಳ ಹಿಂದೆ ಇದೇ ನರಕ ಚತುರ್ದಶಿಯ ದಿನ, ಮತಾಂಧ ಟಿಪ್ಪು ಸುಲ್ತಾನನ ಕ್ರೌರ್ಯ , ಅಟ್ಟಹಾಸಕ್ಕೆ ಅಸಹಾಯಕ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 800 ಮುಗ್ಧ ಜನರು ಬಲಿಯಾದರು. ದೇಶದೆಲ್ಲೆಡೆ ಈ ಬೆಳಕಿನ ಹಬ್ಬವನ್ನು ಆಚರಿಸುತ್ತಿದ್ದರೆ, ನಮ್ಮ ರಾಜ್ಯದ ಮೇಲುಕೋಟೆಯಲ್ಲಿ ದೀಪಾವಳಿಯ ಸಂಭ್ರಮವಿಲ್ಲದೇ ಕತ್ತಲು ಆವರಿಸುತ್ತಿರುತ್ತದೆ.
ಈ ಹೃದಯವಿದ್ರಾವಕ ಘಟನೆಯು ಇತಿಹಾಸದ ಪುಟಗಳಿಗೆ ಮಾತ್ರ ಸೀಮಿತವಾಗಬಾರದು, ನಮ್ಮ ಸಾಮೂಹಿಕ ನೆನಪಿನಿಂದ ಮಾಸಬಾರದು. ಮೇಲುಕೋಟೆ ಹತ್ಯಾಕಾಂಡದ ಹುತಾತ್ಮರನ್ನು ಇಂದು ನಾವೆಲ್ಲರೂ ನೆನೆಯೋಣ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ತಮ್ಮ ಫೇಸ್ಬುಕ್ ಪೇಜ್ನಲ್ಲಿ ಬರೆದುಕೊಂಡಿದ್ದಾರೆ. ಈ ಪೋಸ್ಟ್ ಅನ್ನು ಹಲವರು ಬೆಂಬಲಿಸಿದ್ದಾರೆ
Advertisement