ಚಾಮರಾಜನಗರ: ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ ಸಾವು 

ಬಹಿರ್ದೆಸೆಗೆಂದು ತೆರಳಿದ್ದ ವೇಳೆ ಮಹಿಳೆಯೊಬ್ಬರು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿರುವ ಪ್ರಕರಣ ತಾಲೂಕಿನ ಉಮ್ಮತ್ತೂರು ಗ್ರಾಮದಲ್ಲಿ ನಡೆದಿದೆ .
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಾಮರಾಜನಗರ: ಬಹಿರ್ದೆಸೆಗೆಂದು ತೆರಳಿದ್ದ ವೇಳೆ ಮಹಿಳೆಯೊಬ್ಬರು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿರುವ ಪ್ರಕರಣ ತಾಲೂಕಿನ ಉಮ್ಮತ್ತೂರು ಗ್ರಾಮದಲ್ಲಿ ನಡೆದಿದೆ .

ಸಣ್ಣಮ್ಮ ಮೃತ ದುರ್ದೈವಿ,  ಇವರು ಗ್ರಾಮದ ಶಿವಶಂಕರ್ ಎಂಬುವರ ಜಮೀನಿನಲ್ಲಿ ಕೂಲಿ ಕೆಲಸಕ್ಕೆಂದು ಹೋಗಿದ್ದರು. ಜಮೀನಿನ ಸುತ್ತಲೂ ವಿದ್ಯುತ್ ಸೋಲಾರ್ ಬಿಡಲಾಗಿತ್ತು. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಧ್ಯೆ ಮಹಿಳೆ ಬಹಿರ್ದೆಸೆಗೆ ತೆರಳಿದ್ದಾರೆ. 

ಬಹಿರ್ದೆಸೆ ಮುಗಿಸಿ ಮತ್ತೆ ಹಿಂದಿರುಗುವ ವೇಳೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಅಸ್ವಸ್ಥಗೊಂಡರು. ಈ ವೇಳೆ ಅಸ್ವಸ್ಥರಾದ ಮಹಿಳೆ ಸಣ್ಣಮ್ಮ ಅವರನ್ನು ಸಂತೇಮರಹಳ್ಳಿ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸುವ ಸಲುವಾಗಿ ಕರೆದೊಯ್ಯಲಾಯಿತು. ನಂತರ ಚಿಕಿತ್ಸೆ ಕೊಡಿಸ ಲಾಯಿತಾದರೂ ಅದು ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರ ಸಂಬಂಧಿಕರಾದ ತಾಯಮ್ಮ ಕುದೇರು ಪೊಲೀಸ್  ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com