ಚಿಕ್ಕೋಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಸ್ಥಳದಲ್ಲೆ ಇಬ್ಬರ ಸಾವನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ ಕಣಗಲಾ ಬಳಿ ರಾಷ್ಟ್ರೀಯ ಹೆದ್ದಾರಿ ೪ ರಲ್ಲಿ ನಡೆದಿದೆ.
ವೈಭವ ವಾಡ್ಕರ್(೨೧) ದಿಗ್ವಿಜಯ ಪಾಟೀಲ್(೩೦) ಸ್ಥಳದಲ್ಲೆ ಸಾವು, ಉಳಿದಂತೆ ಕಾರಿನಲ್ಲಿದ್ದ ೯ ಜನರಿಗೆ ಗಂಭೀರ ಗಾಯವಾದ ಹಿನ್ನೆಲೆ ಕೊಲ್ಹಾಪುರದ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ.
ಬೆಳಗಾವಿ ಮೂಲಕ ಗೋವಾ ಪ್ರವಾಸಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಸಂಕೇಶ್ವರ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದರು. ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಾಗಿದೆ.
Advertisement