ಬಾಗಲಕೋಟೆ: ಮನೆ ಮೇಲ್ಛಾವಣಿ ಕುಸಿದು 11 ತಿಂಗಳ ಮಗು ಸಾವು: ತಾಯಿಗೆ ಗಂಭೀರ ಗಾಯ

ಪ್ರವಾಹ ಹಾಗೂ ಇತ್ತೀಚಿಗೆ ಸುರಿದ ಭಾರೀ ಮಳೆಯ ಪರಿಣಾಮವಾಗಿ ನೆನೆದಿದ್ದ ಮನೆಯ ಮೇಲ್ಛಾವಣಿ ಕುಸಿದು ಮಗುವೊಂದು ಸಾವನಪ್ಪಿ, ತಾಯಿಗೆ ಗಂಭೀರ ಗಾಯವಾದ ಘಟನೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ತಮದಡ್ಡಿ ಗ್ರಾಮದಲ್ಲಿ ಸಂಭವಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬಾಗಲಕೋಟೆ: ಪ್ರವಾಹ ಹಾಗೂ ಇತ್ತೀಚಿಗೆ ಸುರಿದ ಭಾರೀ ಮಳೆಯ ಪರಿಣಾಮವಾಗಿ ನೆನೆದಿದ್ದ ಮನೆಯ ಮೇಲ್ಛಾವಣಿ ಕುಸಿದು ಮಗುವೊಂದು ಸಾವನಪ್ಪಿ, ತಾಯಿಗೆ ಗಂಭೀರ ಗಾಯವಾದ ಘಟನೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ತಮದಡ್ಡಿ ಗ್ರಾಮದಲ್ಲಿ ಸಂಭವಿಸಿದೆ.

ಮಗು ಅಚಲ ಭುಜಬುಲಿ ತಿಮ್ಮಣ್ಣವರ  ಎಂಬ 11 ತಿಂಗಳ ಮಗು  ಮೇಲ್ಛಾವಣಿ ಕುಸಿತಕ್ಕೆ ಸ್ಥಳದಲ್ಲಿ ಸಾವನ್ನಪ್ಪಿದೆ.ತಾಯಿ ಅರ್ಚನ ಭುಜಬುಲಿ ತಿಮ್ಮಣ್ಣವರ ಸ್ಥಿತಿ ಗಂಭೀರವಾಗಿದ್ದು, ಬೆಳಗಾವಿಯ ಕೆ ಎಲ್ ಇ  ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಬುಧವಾರ ರಾತ್ರಿ ಮನೆಯಲ್ಲಿ ನಾಲ್ವರು ಮಲಗಿದ್ದರು. ಬಳಿಕ ಇಂದು ಬೆಳಗ್ಗಿನ ನ ಜಾವ ಸುಮಾರು ನಾಲ್ಕು ಗಂಟೆಗೆ ಇಬ್ಬರು ಎದ್ದು ಹೊರಗಡೆ ಬಂದಿದ್ದರು. ಆದರೆ ತಾಯಿ, ಮಗು ಇನ್ನೂ ಮಲಗಿದ್ದರು. ಈ ವೇಳೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಪರಿಣಾಮ ಮಗು ಮೃತಪಟ್ಟಿದ್ದು, ತಾಯಿಗೆ ಗಂಭೀರ ಗಾಯಗಳಾಗಿದೆ. ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com