ಮೈಸೂರು: ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ ತೆರೆಳುತ್ತಿದ್ದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಶಿಷ್ಯನಿಗೆ ಎಲ್ಲರ ಎದುರೇ ಕೆನ್ನೆಗೆ ಬಾರಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿ ವಾಪಸ್ ಹೋಗುತ್ತಿದ್ದ ವೇಳೆ ಸಿದ್ದರಾಮಯ್ಯ ಅವರ ಬೆಂಬಲಿಗ ಯಾರಿಗೋ ಫೋನ್ ಮಾಡಿ ಮಾತನಾಡುವಂತೆ ಅವರಿಗೆ ಕೊಟ್ಟಿದ್ದಾರೆ.
ಇದಕ್ಕೆ ಸಿಟ್ಟಿಗೆದ್ದಂತೆ ಕಾಣುತ್ತಿದ್ದ ಸಿದ್ದರಾಮಯ್ಯ ಅವರು ಮೊಬೈಲ್ ತಳ್ಳಿ, ಬೆಂಬಲಿಗನ ಕೆನ್ನೆಗೆ ಬಾರಿಸಿ, ನಡಿಯೋ ಎಂದು ಕರೆದೊಯ್ದಿದ್ದಾರೆ.
ಕೈ ಮುಖಂಡರ ಸಮ್ಮುಖದಲ್ಲೇ, ವಿಮಾನ ನಿಲ್ದಾಣದ ಆವರಣದಲ್ಲೇ ಬೆಂಬಲಿಗನ ಕೆನ್ನೆಗೆ ಸಿದ್ದರಾಮಯ್ಯ ಹೊಡೆದಿದ್ದು ಚರ್ಚೆಗೆ ಗ್ರಾಸವಾಗಿದೆ.
ಸಿದ್ದರಾಮಯ್ಯ ಶಿಷ್ಯ ಯಾವುದೋ ಅಧಿಕಾರಿಗೆ ಕರೆ ಮಾಡಿ ಶಿಫಾರಸು ಮಾಡುವಂತೆ ಹೇಳಿ ಸಿದ್ದರಾಮಯ್ಯ ಕಿವಿಗೆ ಫೋನ್ ಇಟ್ಟಿದ್ದಾರೆ. ಇದರಿಂದ ಕಿರಿಕಿರಿಗೊಳಗಾದ ಸಿದ್ದರಾಮಯ್ಯ ಮೊಬೈಲ್ ತಳ್ಳಿ ಆತನ ಕೆನ್ನೆಗೆ ಬಾರಿಸಿದ್ದಾರೆ. ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
Advertisement