ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ . ಡಿ. ಕುಮಾರಸ್ವಾಮಿ ಅವರಿಗೆ ಭೂ ಕಂಟಕ ಎದುರಾಗಿದೆ. ಹಲಗೆವಡೇರಹಳ್ಳಿಯ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರಿಗೆ ಸಮನ್ಸ್ ಜಾರಿ ಮಾಡಿದೆ.
ಅಕ್ಟೋಬರ್ 4 ರಂದು ಖುದ್ಧು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಎಚ್ ಡಿ ಕುಮಾರಸ್ವಾಮಿ ಅವರಿಗೆ ಸಮನ್ಸ್ ನೀಡಿದೆ.
2007ರಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್ ಡಿ ಕುಮಾರಸ್ವಾಮಿ ಅವರು ಬೆಂಗಳೂರಿನ ಬನಶಂಕರಿ 5ನೇ ಹಂತದಲ್ಲಿರುವ ಹಲಗೆ ವಡೇರಹಳ್ಳಿಯಲ್ಲಿ 2 ಎಕರೆ 24 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿ 2012ರಲ್ಲಿ ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿಯ ಮಹಾದೇವಸ್ವಾಮಿ ಎಂಬುವರು ದೂರು ದಾಖಲಿಸಿದ್ದರು
Advertisement