ಬೆಂಗಳೂರು: ಪೊಲೀಸ್ ವೇತನ, ಭತ್ಯ ಪರಿಷ್ಕರಿಸುವ ಹಿರಿಯ ಪೊಲೀಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್ ವರದಿಗೆ ಸಚಿವ ಸಂಪುಟ ಸಭೆ ಘಟನೋತ್ತರ ಅನುಮೋದನೆ ನೀಡಿದೆ. ಆಗಸ್ಟ್ 1 ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆಗೆ ಸಂಪುಟ ಒಪ್ಪಿಗೆ ನೀಡಿದೆ. ಆದರೆ ಪರಿಷ್ಕೃತ ವೇತನ ಎಂದಿನಿಂದ ಅಧಿಕೃತವಾಗಿ ಜಾರಿಯಾಗಲಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧು ಸ್ವಾಮಿ, ಔರಾದ್ಕರ್ ವರದಿಯಂತೆ ವೇತನ ಪರಿಷ್ಕರಣೆಗೆ ಸಚಿವ ಸಂಪುಟ ಸಭೆ ಘಟನೋತ್ತರ ಅನುಮೋದನೆ ನೀಡಿದೆ. ಮೈತ್ರಿ ಸರ್ಕಾರದ ಅವಧಿಯಲ್ಲಿ ಅಂದರೆ ಜುಲೈ 16 ರಂದು ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಆದೇಶದಂತೆ ಆಗಸ್ಟ್ 1ರಿಂದ ಪೂರ್ವಾನ್ವಯವಾಗುವಂತೆ ವೇತನ ಪರಿಷ್ಕರಣೆಯಾಗಲಿದೆ ಎಂದರು.
ಆದರೆ, ಪರಿಷ್ಕೃತ ವೇತನ ಎಂದಿನಿಂದ ಅನುಷ್ಠಾನಗೊಳ್ಳಲಿದೆ ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ದೊರೆತಿಲ್ಲ. ಹೀಗಾಗಿ ಪರಿಷ್ಕೃತ ವೇತನ ಪಡೆಯಲು ಪೊಲೀಸರು ಇನ್ನೂ ಕೆಲ ತಿಂಗಳು ಕಾಯಬೇಕಾಗಬಹುದು. ಔರಾದ್ಕರ್ ಸಮಿತಿ ವರದಿ ಜಾರಿಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಂದಾಜು 386.26 ಕೋಟಿ ರೂ ಹೊರೆ ಬೀಳಲಿದೆ.
ಔರಾದ್ಕರ್ ಸಮಿತಿಯ ವರದಿಯಲ್ಲಿ ಅಗ್ನಿಶಾಮಕ ಹಾಗೂ ಕಾರಾಗೃಹ ಇಲಾಖೆಗೆ ಈ ಸೌಲಭ್ಯವನ್ನು ವಿಸ್ತರಿಸಲು ಸಚಿವ ಸಂಪುಟ ಸಭೆಯಲ್ಲಿ ಚೆರ್ಚೆ ನಡೆಸಲಾಗಿದೆ. ಈ ಎರಡೂ ಇಲಾಖೆಗಳನ್ನು ಸೇರಿಸಿ ವೇತನ ಪರಿಷ್ಕರಿಸುವ ಬಗ್ಗೆ ಮುಂದಿನ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜೆ.ಸಿ. ಮಾಧುಸ್ವಾಮಿ ತಿಳಿಸಿದರು.
ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಹೆಸರನ್ನು 'ಕಲ್ಯಾಣ ಕರ್ನಾಟಕ' ಪ್ರದೇಶಾಭಿವೃದ್ದಿ ಮಂಡಳಿ ಎಂದು ಹೆಸರು ಬದಲಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು. ಸ್ವಾತಂತ್ರ್ಯ ಪೂರ್ವದಲ್ಲಿ ರಾಜರ ಆಡಳಿತದಲ್ಲಿದ್ದ ಪ್ರದೇಶಗಳನ್ನು ಸ್ವಾತಂತ್ರ್ಯೋತ್ತರದಲ್ಲೂ ಅದೇ ಹೆಸರಿನಿಂದ ಕರೆಯುತ್ತಿರುವುದು ದಾಸ್ಯದ ಸಂಕೇತ ಎಂಬ ಆರೋಪಗಳು ಕೇಳಿ ಬಂದಿವೆ. ಹೀಗಾಗಿ ಹೈದರಾಬಾದ್ ಅಭಿವೃದ್ದಿ ಮಂಡಳಿ ಹಾಗೂ ಈ ಪ್ರದೇಶಗಳನ್ನು ಕಲ್ಯಾಣ ಕರ್ನಾಕಟವೆಂದು ಮರುನಾಮಕರಣ ಮಾಡುವ ಮೂಲಕ ಬಸವಣ್ಣನ ಹೆಸರನ್ನು ಅಜರಾಮರಗೊಳಿಸಲು ಸಂಪುಟ ಒಪ್ಪಿಗೆ ನೀಡಿದೆ.
ರಾಜ್ಯದಲ್ಲಿ 36 ಸಾವಿರ ಕೆರೆಗಳಿದ್ದು ಆರ್ಥಿಕ ಶಕ್ತಿ ಸಿಕ್ಕರೆ ಎಲ್ಲಾ ಕೆರೆಗಳನ್ನು ಅಭಿವೃದ್ದಿಪಡಿಸಿ ನೀರು ತುಂಬಿಸಲು ಕ್ರಮವಹಿಸಲಾಗುವುದು. ಬ್ಯಾರೇಜ್, ಪಿಕಪ್ ಡ್ಯಾಂಗಳನ್ನು ನಿರ್ಮಿಸುವ ಉದ್ದೇಶವು ಸಹ ಸರ್ಕಾರದ ಮಟ್ಟದಲ್ಲಿದೆ. ಒಂದೊಂದು ಟಿಎಂಸಿ ನೀರನ್ನು ಮಳೆಗಾಲದಲ್ಲಿ ಸಂಗ್ರಹಿಸಿ, ಕೆರೆಗಳಿಗೆ ತುಂಬಿಸಲು ಡಿಪಿಆರ್ ಸಿದ್ದಪಡಿಸಲಾಗುತ್ತಿದೆ. ಆರ್ಥಿಕ ಪರಿಸ್ಥಿತಿಯನ್ನು ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಸಚಿವ ಸಂಪುಟದ ಇತರೆ ಪ್ರಮುಖ ತೀರ್ಮಾನಗಳು:
Advertisement