ಬೆಂಗಳೂರು: ಬಿಎಂಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ 9ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ರಾತ್ರಿ ವಿಜಯನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಗ್ರಹಾರ ದಾಸರಹಳ್ಳಿಯ ಆಯುಷ್(14) ಮೃತ ವಿದ್ಯಾರ್ಥಿ. ಕಳೆದ ರಾತ್ರಿ 8ರ ವೇಳೆ ಮನೆಯ ಮುಂಭಾಗ ರಸ್ತೆ ದಾಟುತ್ತಿದ್ದಾಗ ವೀರೇಶ ಚಿತ್ರಮಂದಿರದ ಕಡೆಯಿಂದ ಕಾಮಾಕ್ಷಿಪಾಳ್ಯದ ಕಡೆಗೆ ಹೋಗುತ್ತಿದ್ದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಆಯುಷ್ನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಆಯುಷ್, ವಿಜಯನಗರದ ಆರ್ಚಿಡ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ. ಆತನ ಸಾವಿನ ಸುದ್ದಿ ತಿಳಿದ ಸಹಪಾಠಿಗಳು, ಶಿಕ್ಷಕರು ಮಮ್ಮಲ ಮರಗಿದ್ದಾರೆ.
Advertisement