ಕೋಲಾರ: ದ್ವಿಚಕ್ರ ವಾಹನವೊಂದಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೆಜಿಎಫ್ ಹೊರವಲಯದ ಕೋಡಿಯಪಲ್ಲಿ ಕುಪ್ಪಂರಸ್ತೆಯಲ್ಲಿ ಶನಿವಾರ ನಡೆದಿದೆ.
57 ವರ್ಷದ ವೆಂಕಟೇಶ್ ಹಾಗೂ 27 ವರ್ಷದ ಕನಕರಾಜ್ ಮೃತಪಟ್ಟ ದುರ್ದೈವಿಗಳು. ವೆಂಕಟೇಶ್ ತಮ್ಮ ಹಿರಿಯ ಮಗ ರವಿಯ ಮದುವೆ ಆಮಂತ್ರಣ ನೀಡಲು ತೆರಳುತ್ತಿದ್ದಾಗ ಈ ದುರ್ಘಟನೆ ಸಂಬಂಧಿಸಿದೆ ಎಂದು ತಿಳಿದು ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Advertisement