ಬೆಂಗಳೂರು: ಕೊಲೆ ಆರೋಪಿಗಳ ಮೇಲೆ ಫೈರಿಂಗ್ ಮಾಡಿ ಬಂಧಿಸಿದ ಪೊಲೀಸರು

ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ಕ್ಯಾಂಟರ್​ ಚಾಲಕ ಮಹೇಶ್​ ಕುಮಾರ್ ​(35) ನನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಮೇಲೆ ಕಾಮಾಕ್ಷಿಪಾಳ್ಯ ಪೊಲೀಸರು ರವಿವಾರ ಬೆಳ್ಳಂಬೆಳಗ್ಗೆ ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ಕ್ಯಾಂಟರ್​ ಚಾಲಕ ಮಹೇಶ್​ ಕುಮಾರ್ ​(35) ನನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಮೇಲೆ ಕಾಮಾಕ್ಷಿಪಾಳ್ಯ ಪೊಲೀಸರು ರವಿವಾರ ಬೆಳ್ಳಂಬೆಳಗ್ಗೆ ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರವೀಣ್ ಅಲಿಯಾಸ್ ಇಟಾಚಿ ಹಾಗೂ ಅಭಿ ಅಲಿಯಾಸ್ ಅಂದ್ರಳ್ಳಿ ಅಭಿ ಅವರ ಕಾಲಿಗೆ ಪೊಲೀಸರು ಕಾವೇರಿಪುರ ಬಳಿ ಇಂದು ಬೆಳಗ್ಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಇವರಿಬ್ಬರೂ ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯರಾತ್ರಿ ಮಹೇಶ್ ಕುಮಾರ್ ಎಂಬಾತನನ್ನು ಸುಂಕದಕಟ್ಟೆಯ ಹೆಗ್ಗನಹಳ್ಳಿ ಕ್ರಾಸ್ ಬಳಿ ಅಟ್ಟಾಡಿಸಿಕೊಂಡು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com