ರಾಜ್ಯದ ಐಎಫ್ ಎಸ್ ಅಧಿಕಾರಿ ಅವತಾರ್ ಸಿಂಗ್ ಆತ್ಮಹತ್ಯೆ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ  ಬೆಂಗಳೂರಿನ ಅರಣ್ಯ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಐಎಫ್ ಎಸ್ ಅಧಿಕಾರಿಯೊಬ್ಬರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ  ಬೆಂಗಳೂರಿನ ಅರಣ್ಯ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಐಎಫ್ ಎಸ್ ಅಧಿಕಾರಿಯೊಬ್ಬರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವತಾರ್ ಸಿಂಗ್ , ಆತ್ಮಹತ್ಯೆ ಮಾಡಿಕೊಂಡಿರುವ ಐಎಫ್ ಎಸ್ ಅಧಿಕಾರಿ ಎನ್ನಲಾಗಿದೆ.ಶನಿವಾರ ಕೆಲಸಕ್ಕೆ ಹೋಗಿದ್ದ ಅವತಾರ್ ಸಿಂಗ್ ಅವರು ಯಲಹಂಕದಲ್ಲಿನ ತಮ್ಮ ಪ್ರೇಸ್ಟೀಜ್ ಮೌಂಟ್ ಕಾರ್ಲೋ ಅಪಾರ್ಟ್ ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುದ್ದಿ ತಿಳಿದ ಕೂಡಲೇ ಹಿರಿಯ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ಇಲ್ಲಿಯವರೆಗೂ ತಿಳಿದುಬಂದಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com