ಸಂಪುಟ ವಿಸ್ತರಣೆ ಕುರಿತು ಯಾವುದೇ ಚಿಂತನೆಗಳಿಲ್ಲ: ಬಿಜೆಪಿ

ಪ್ರವಾಹ ಪೀಡಿತರಿಗೆ ಪರಿಹಾರ ನೀಡುವುದರತ್ತ ರಾಜ್ಯ ಸರ್ಕಾರ ಗಮನ ಹರಿದಿದ್ದು, ಪ್ರಸ್ತುತವಂತೂ ಸಚಿವ ಸಂಪುಟ ವಿಸ್ತರಣೆಯಿಲ್ಲ ರಾಜ್ಯದ ಆಡಳಿತಾರೂಢ ಬಿಜೆಪಿ ಪಕ್ಷ ಶನಿವಾರ ಹೇಳಿದೆ. 
ಮುಖ್ಯಮಂತ್ರಿ ಯಡಿಯೂರಪ್ಪ
ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು: ಪ್ರವಾಹ ಪೀಡಿತರಿಗೆ ಪರಿಹಾರ ನೀಡುವುದರತ್ತ ರಾಜ್ಯ ಸರ್ಕಾರ ಗಮನ ಹರಿದಿದ್ದು, ಪ್ರಸ್ತುತವಂತೂ ಸಚಿವ ಸಂಪುಟ ವಿಸ್ತರಣೆಯಿಲ್ಲ ರಾಜ್ಯದ ಆಡಳಿತಾರೂಢ ಬಿಜೆಪಿ ಪಕ್ಷ ಶನಿವಾರ ಹೇಳಿದೆ. 

34 ಸದಸ್ಯರ ಸಚಿವಾಲಯದಲ್ಲಿ 16 ಸ್ಥಾನಗಳೂ ಈಗಲೂ ಖಾಲಿಯಿದೆ. ಹೀಗಾಗಿ ಶೀಘ್ರದಲ್ಲಿಯೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆಂದು ಹೇಳಲಾಗುತ್ತಿತ್ತು. ಈ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿರುವ ರಾಜ್ಯ ಬಿಜೆಪಿ, ಪ್ರಸ್ತುತವಂತೂ ಸಚಿವ ಸಂಪುಟ ವಿಸ್ತರಣೆಯಿಲ್ಲ. ಭವಿಷ್ಯದಲ್ಲಿ ಆಗಬಹುದು. ಪ್ರಸ್ತುತ ರಾಜ್ಯಸರ್ಕಾರ ಪರಿಹಾರ ನೀಡುವ ಕಾರ್ಯದಲ್ಲಿ ತೊಡಗಿಕೊಂಡಿದೆ ಎಂದು ಹೇಳಿದೆ. 

ರಾಜ್ಯದ ಪರಿಸ್ಥಿತಿ ಸುಧಾರಿಸುವ ಸಲುವಾಗಿ ಸರ್ಕಾರ ಪ್ರವಾಹ ಪೀಡಿತರಿಗೆ ಪರಿಹಾರ ನೀಡುವ ಕಾರ್ಯದಲ್ಲಿ ತೊಡಗಿಕೊಂಡಿದೆ. ಹೀಗಾಗಿ ಪ್ರಸ್ತುತವಂತೂ ಸಂಪುಟ ವಿಸ್ತರಣೆಯಿಲ್ಲ ಎಂದು ಬಿಜೆಪಿ ವಕ್ತಾರ ಜಿ.ಮಧುಸೂದನ ಅವರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com