ಮೈಸೂರು: ಪ್ರೀತಿಗೆ ಕುಟುಂಬದ ವಿರೋಧ, ಲಕ್ಷ್ಮಣತೀರ್ಥಕ್ಕೆ ಹಾರಿ ಪ್ರೇಮಿಗಳ ಆತ್ಮಹತ್ಯೆ!

ಪ್ರೀತಿಗೆ ಕುಟುಂಬ ಸದಸ್ಯರು ವಿರೋಧಿಸಿದ್ದ ಹಿನ್ನೆಲೆ ಬೇಸರಗೊಂಡ ಪ್ರೇಮಿಗಳು ಮೈಸೂರಿನ ಲಕ್ಷ್ಮಣತೀರ್ಥಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೈಸೂರು: ಪ್ರೀತಿಗೆ ಕುಟುಂಬ ಸದಸ್ಯರು ವಿರೋಧಿಸಿದ್ದ ಹಿನ್ನೆಲೆ ಬೇಸರಗೊಂಡ ಪ್ರೇಮಿಗಳು ಮೈಸೂರಿನ ಲಕ್ಷ್ಮಣತೀರ್ಥಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರಿನ  ಹೊಸೂರು ಕಲ್ಲಹಳ್ಳಿಯ ರಂಜಿತಾ (19) ಮತ್ತು ಮೈಸೂರು ವಿಜಯನಗರ ನಿವಾಸಿ ಶಿವು (21)  ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಇವರ ವಿವಾಹಕ್ಕೆ ಇಬ್ಬರ ಕುಟುಂಬದಲ್ಲಿಯೂ ಸಮ್ಮತಿ ಇರಲಿಲ್ಲ. ಹಾಗಾಗಿ ತಾವು ಆತ್ಮಹತ್ಯೆ ದಾರಿ ಹಿಡಿದರೆಂದು ಹೇಳಲಾಗಿದೆ.

ಈ ಯುವಜೋಡಿ  ಮೈಸೂರಿನ  ಸಾಗರಕಟ್ಟೆ ಬಳಿ ಹರಿಯುವ ಲಕ್ಷ್ಮಣತೀರ್ಥ ನದಿ ಸಮೀಪಕ್ಕೆ ತೆರಳಿದ್ದು ಸೋಮವಾರ ಸಂಜೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳಕ್ಕಾಗಮಿಸಿದ ಪೋಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಮೃತದೇಹಕ್ಕೆ ಹುಡುಕಾಟ ನಡೆಸಿದ್ದಾರೆ. ಘಟನೆ ಕುರಿತಂತೆ ಇಲವಾಲ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com