ಮೊಹರಂ ಆಚರಣೆ ವೇಳೆ ವಿದ್ಯುತ್​ ತಗುಲಿ ಯುವಕ ಸಾವು

ಮೊಹರಂ ಆಚರಣೆ ವೇಳೆ ಅಲಾಯಿ ಕುಣಿಯುತ್ತಿದ್ದ ಯುವಕ ಲಾಗ ಹೊಡೆಯುವ ಸಂದರ್ಭದಲ್ಲಿ ವಿದ್ಯುತ್​ ತಗುಲಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ಕೋಟೆ ಪ್ರದೇಶದಲ್ಲಿ ಮಂಗಳವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕಂಪ್ಲಿ: ಮೊಹರಂ ಆಚರಣೆ ವೇಳೆ ಅಲಾಯಿ ಕುಣಿಯುತ್ತಿದ್ದ ಯುವಕ ಲಾಗ ಹೊಡೆಯುವ ಸಂದರ್ಭದಲ್ಲಿ ವಿದ್ಯುತ್​ ತಗುಲಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ಕೋಟೆ ಪ್ರದೇಶದಲ್ಲಿ ಮಂಗಳವಾರ ನಡೆದಿದೆ

ಕಂಪ್ಲಿಯ 18ನೇ ವಾರ್ಡ್​ನ ತಳವಾರ ಓಣಿಯ ಉಪ್ಪಾರ ಕುಮಾರ್​ (24 ವರ್ಷ) ಮೃತ ದುರ್ದೈವಿ. ಇವರು ಅಲಾಯಿ ಕುಣಿಯುತ್ತಿದ್ದ ಸಂದರ್ಭದಲ್ಲಿ ಲಾಗ ಹೊಡೆಯಲು ಪ್ರಯತ್ನಿಸಿದ್ದರು. ಆಗ ಅವರ ಕಾಲು ಅಲಂಕಾರಕ್ಕೆ ಅಳವಡಿಸಿದ್ದ ವಿದ್ಯುತ್ ದೀಪದ ತಂತಿಗೆ ತಗುಲಿದ್ದರಿಂದ ವಿದ್ಯುತ್​ ಪ್ರವಹಿಸಿ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಂಪ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿದ ಬಳಿಕ ಶವವನ್ನು ಸಂಬಂಧಿಕರಿಗೆ ಒಪ್ಪಿಸಲಾಗಿದೆ. ಆಸ್ಪತ್ರೆ ಬಳಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಸರ್ಕಾರಿ ಆಸ್ಪತ್ರೆಗೆ ಶಾಸಕ ಜೆ.ಎನ್​. ಗಣೇಶ್​  ಭೇಟಿ ನೀಡಿ, ಮೃತನ ಕುಟುಂಬದವರನ್ನು ಸಾಂತ್ವನ ಹೇಳಿದರು. ಸಾಧ್ಯವಾಗುವ ರೀತಿಯಲ್ಲಿ ಪರಿಹಾರ ಕೊಡಿಸಲು ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದರು.  ಘಟನೆಗೆ ಸಂಬಂಧಿಸಿದಂತೆ ಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com