ಸೊರಬ: ಕೆರೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು!

ಕೆರೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಈಜುಬಾರದೆ ಸಾವನ್ನಪ್ಪಿರುವ ದುರ್ಘಟನೆ ಸೊರಬದ ಉದ್ರಿಯಲ್ಲಿ ಸಂಭವಿಸಿದೆ.
ಸೊರಬ: ಕೆರೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು!
ಸೊರಬ: ಕೆರೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು!

ಶಿವಮೊಗ್ಗ: ಕೆರೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಈಜುಬಾರದೆ ಸಾವನ್ನಪ್ಪಿರುವ ದುರ್ಘಟನೆ ಸೊರಬದ ಉದ್ರಿಯಲ್ಲಿ ಸಂಭವಿಸಿದೆ.

ವಿನಾಯಕ (16) ಹಾಗೂ ಕಾರ್ತಿಕ್ (16)  ಮೃತಪಟ್ಟ ದುರ್ದೈವಿಗಳು. ಮೃತರು ಉದ್ರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಾಗಿದ್ದು, ಭಾನುವಾರ ಮಧ್ಯಾಹ್ನ 2 ಗಂಟೆಗೆ ಕೆರೆಗೆ ಈಜಲು ಹೋಗಿದ್ದರು. ಅವರಿಗೆ ಸರಿಯಾಗಿ ಈಜು ಬರುತ್ತಿರಲಿಲ್ಲ. ಆಳವಾದ ನೀರಿನ ಸೆಳೆತಕ್ಕೆ ಸಿಲುಕಿ ಇವರು ಸಾವನ್ನಪ್ಪಿದ್ದಾರೆ.

ನೀರಿನಲ್ಲಿ ತೇಲುತ್ತಿದ್ದ ಶವವನ್ನು ಗ್ರಾಮಸ್ಥರು ದಡಕ್ಕೆ ತಂದರು. ಘಟನಾ ಸ್ಥಳಕ್ಕೆ ಸೊರಬ ಠಾಣೆ ವೃತ್ತ ನಿರೀಕ್ಷಕ ಉಮಾಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೊಕದ್ದಮೆ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com