ಮೈಸೂರು: ಕಾರಿನಲ್ಲಿ ಗ್ರಾಮ ಪಂಚಾಯಿತಿ ಸದಸ್ಯನ ಶವ ಪತ್ತೆ

33 ವರ್ಷದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ಶವ ಕಾರಿನಲ್ಲಿ ಪತ್ತೆಯಾಗಿದೆ.. ಕೆ.ಆರ್.ನಗರ ತಾಲೂಕಿನ ಹನಸೋಗೆ ಗ್ರಾಮ ಪಂಚಾಯಿತಿ ಸದಸ್ಯ ಅಶೋಕ  ಮೃತ ವ್ಯಕ್ತಿ .
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು: 33 ವರ್ಷದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ಶವ ಕಾರಿನಲ್ಲಿ ಪತ್ತೆಯಾಗಿದೆ.. ಕೆ.ಆರ್.ನಗರ ತಾಲೂಕಿನ ಹನಸೋಗೆ ಗ್ರಾಮ ಪಂಚಾಯಿತಿ ಸದಸ್ಯ ಅಶೋಕ  ಮೃತ ವ್ಯಕ್ತಿ .

ಪಿರಿಯಾಪಟ್ಟಣದ ಕಾರು ರಾವಂದೂರು -ಅತ್ತಿಗೋಡು ರಸ್ತೆಯ ಬದಿಯಲ್ಲಿ ಕಾರು ನಿಂತಿದ್ದು, ಸ್ಥಳೀಯರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಸ್ಥಳಕ್ಕೆ ಬಂದು ಕಾರ್‌ನ ಗ್ಲಾಸ್‌ ಒಡೆದು ನೋಡಿದಾಗ ಒಳಗಿದ್ದ ವ್ಯಕ್ತಿ ಕುಳಿತ ಸ್ಥಿತಿಯಲ್ಲೇ ಮೃತಪಟ್ಟಿರುವುದು ಕಂಡುಬಂದಿದೆ.

ಕಾರ್‌ನಲ್ಲಿ ಇದ್ದ ಪೋನ್‌ ನಂಬರ್‌ಗಳಿಗೆ ಕರೆ ಮಾಡಿ ವಿಚಾರಿಸಿದಾಗ ಇವರು ಗ್ರಾಪಂ ಸದಸ್ಯ ಅಶೋಕ್‌ ಎಂಬುದು ತಿಳಿದುಬಂದಿದ್ದು, ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. 

ಮಾಜಿ  ಸಚಿವ ಸಾ.ರಾ ಮಹೇಶ್ ಅವರ ಹಿಂಬಾಲಕರಾಗಿದ್ದ ಅಶೋಕ್, ಚುಂಚನಕಟ್ಟೆ ಹೋಬಳಿ ಜೆಡಿಎಸ್ ಯುವ ಘಟಕದ ಅಧ್ಯಕ್ಷರೂ ಆಗಿದ್ದರು.

ಇವರು ಮೂಲತಃ ಕೆ.ಆರ್‌.ನಗರ ತಾಲೂಕು ಹೊಳೆತಂದ್ರೆ ಗ್ರಾಮದವರಾಗಿದ್ದಾರೆ. ಪಿರಿಯಾಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾವಿಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com