ಆಟೋಗೆ ಕಾರು ಗುದ್ದಿಸಿದ ಅಪ್ರಾಪ್ತ: ಚಾಲಕ ಸಾವು

ರಸ್ತೆ ಬದಿ ನಿಂತಿದ್ದ ಆಟೋಗೆ ಅತಿವೇಗವಾಗಿ ಅಪ್ರಾಪ್ತನೊಬ್ಬ ಕಾರು ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆಸಿದ ಪರಿಣಾಮ ಆಟೋ ಚಾಲಕ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭೂಪಸಂದ್ರದ ಕಲ್ಪನಾ ಚಾವ್ಲಾ ರಸ್ತೆಯಲ್ಲಿ ಗುರುವಾರ ನಡೆದಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಸ್ತೆ ಬದಿ ನಿಂತಿದ್ದ ಆಟೋಗೆ ಅತಿವೇಗವಾಗಿ ಅಪ್ರಾಪ್ತನೊಬ್ಬ ಕಾರು ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆಸಿದ ಪರಿಣಾಮ ಆಟೋ ಚಾಲಕ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭೂಪಸಂದ್ರದ ಕಲ್ಪನಾ ಚಾವ್ಲಾ ರಸ್ತೆಯಲ್ಲಿ ಗುರುವಾರ ನಡೆದಿದೆ. 

ನಾಗಶೆಟ್ಟಿಹಳ್ಳಿ ನಿವಾಸಿ ನಾಗರಾಜ್ (47) ಮೃತ ದುರ್ದೈವಿ. ಈ ಘಟನೆಯಲ್ಲಿ ಗಾಯಗೊಂಡಿರುವ ಮೃತರ ಸ್ನೇಹಿತ ಲೂರ್ದನಾಥ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಪ್ರಕರಣ ಸಂಬಂಧ ಅಪ್ರಾಪ್ತ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಟೋ ಚಾಲಕ ನಾಗರಾಜ್ ಅವರು, ಮಧ್ಯಾಹ್ನ 1.30ರ ಸುಮಾರಿಗೆ ಕಲ್ಪನಾ ಚಾವ್ಲಾ ರಸ್ತೆ ಬದಿ ಆಟೋ ನಿಲ್ಲಿಸಿ ತನ್ನ ಸ್ನೇಹಿತನ ಜೊತೆ ಮಾತನಾಡುತ್ತಿದ್ದರು. ಆ ವೇಳೆ ಅತಿವೇಗವಾಗಿ ಕಾರು ಓಡಿಸಿಕೊಂಡು ಬಂದ 15 ವರ್ಷದ ಬಾಲಕ, ಏಕಾಏಕಿ ಆಟೋಗೆ ರಭಸದಿಂದ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ಗಂಭೀರವಾಗಿ ಗಾಯಾಗೊಂಡಿದ್ದ ಆಟೋ ಚಾಲಕ ನಾಗರಾಜ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅವರ ಗೆಳೆಯ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com