ಚಿತ್ರದುರ್ಗ: ಕಾರು ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟಿದ್ದು, 7 ಜನ ಗಂಭೀರ ಗಾಯಗೊಂಡಿರುವ ದುರ್ಘಟನೆ ಹೊಸದುರ್ಗ ತಾಲೂಕಿನ ಕಲ್ಕೆರೆ ಎಂಬ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಗೌತಮ್ ಸಿಂಗ್ , ಮದನ್ ಸಿಂಗ್ , ಮುಖೇಶ್ ಸಿಂಗ್ , ಲೋಕೇಶ್ ಎಂದು ಗುರುತಿಸಲಾಗಿದೆ.
ಗಣೇಶೋತ್ಸವ ಸಮಾರಂಭಕ್ಕೆ ತೆರಳಿದ್ದ ಲೋಕೇಶ್ ಕ್ರೂಸರ್ ನಲ್ಲಿ ಮಧ್ಯರಾತ್ರಿ ಹಿಂದಿರುಗುತ್ತಿದ್ದ ವೇಳೆ ಕಾರು, ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶ್ರೀರಾಂಪುರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Advertisement