ಮಂಗಳೂರು: ನೆರೆ ಸಂತ್ರಸ್ತರ ಸಂರಕ್ಷಣೆ ಮಾಡುವ ಜವಾಬ್ದಾರಿ ಕೇಂದ್ರ ಮತ್ತು ರಾಜ್ಯ ಸರಕಾರದ್ದು. ಈ ಜವಾಬ್ದಾರಿಯನ್ನು ಎರಡೂ ಸರ್ಕಾರಗಳು ಸಮರ್ಪಕವಾಗಿ ನಿಭಾಯಿಸುತ್ತೇವೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ "ಹೌಡಿ ಮೋದಿ" ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ನಮ್ಮ ದೇಶದ ಹಿರಿಮೆ ಜಗತ್ತಿನಾದ್ಯಂತ ಪಸರಿಸಲಿದೆ ಎಂದರು.
ಅಮೆರಿಕ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ವೇದಿಕೆ ಹಂಚಿಕೊಂಡು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಅನಿವಾಸಿ ಭಾರತೀಯರಾದ ಇಂಜಿನಿಯರ್ಗಳು, ವೈದ್ಯರು, ಉದ್ಯಮಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ. ಜಾಗತಿಕ ವಿಷಯಗಳ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ. ನಮ್ಮ ದೇಶದ ಹಿರಿಮೆ ಇತರ ದೇಶಗಳು ಕೊಂಡಾಡುವಂತಾರಾಗುವಲ್ಲಿ ಈ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದು ಹೇಳಿದರು.
Advertisement